Thursday, June 13, 2024

ಸತ್ಯ | ನ್ಯಾಯ |ಧರ್ಮ

ದಿಡೀರ್ ಎದೆನೋವು, ಹೊಟ್ಟೆ ಉರಿ ; ಹೆಚ್.ಡಿ.ರೇವಣ್ಣ ಆಸ್ಪತ್ರೆಗೆ ದಾಖಲು

ಪ್ರಜ್ವಲ್ ರೇವಣ್ಣನ ಅತ್ಯಾಚಾರ ಪ್ರಕರಣದ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ, ಅವರ ವಶದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜ್ವಲ್ ರೇವಣ್ಣನ ಅಶ್ಲೀಲ ವೀಡಿಯೋದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತಹ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಈಗಾಗಲೇ ಅವರನ್ನು ಕೋರ್ಟ್ ಗೆ ಹಾಜರುಪಡಿಸಿ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಈ ನಡುವೆ ಹೆಚ್.ಡಿ.ರೇವಣ್ಣ ಅವರನ್ನು ವೈದ್ಯಕೀಯ ತಪಾಸಣೆ ನಡೆಸಿ, ಯಾವುದೇ ಅನಾರೋಗ್ಯ ಕಾಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜೈಲಿಗೆ ಕರೆದೊಯ್ದಿದ್ದರು.

ಆದರೆ ಈಗ ದಿಢೀರನೇ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ.

ಅಲ್ಲದೇ ಹೊಟ್ಟೆ ಉರಿ ಕೂಡ ಹೆಚ್ಚಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರು ಹೆಚ್.ಡಿ ರೇವಣ್ಣ ಅವರಿಗೆ ಚಿಕಿತ್ಸೆ ನೀಡುತ್ತಿರೋದಾಗಿ ತಿಳಿದು ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು