ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಅವರ ಸರ್ಕಾರ ಪತನವಾಗಲಿದೆ. ಇದು ನೂರಕ್ಕೆ ನೂರರಷ್ಟು ಸತ್ಯ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಎರಡು ದಿನಗಳಿಂದ ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಸರ್ಕಾರ ಪಥನವಾಗಿ ಹೊಸ ಸರ್ಕಾರ ರಚನೆ ಆಗುವ ಬಗ್ಗೆ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ಕಾಗಿ ತಿರುಗೇಟು ನೀಡಿದ್ದಾರೆ.
ಮೋದಿಯವರು ಉದ್ಧವ್ ಠಾಕ್ರೆ ಬಗ್ಗೆ ಮಾತನಾಡಿದ್ದು ಏಕೆ? ಉದ್ಧವ್ ಠಾಕ್ರೆ ಅವರಿಗೆ ಅಲ್ಲಿ ಶಕ್ತಿ ಇದೆ ಎಂದರ್ಥವಲ್ಲವೇ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಶಾಸಕರೆಲ್ಲ ಅಲ್ಲಿ ಯೂಟರ್ನ್ ಆಗಲಿದ್ದಾರೆ. ಮಹಾರಾಷ್ಟ್ರದಲ್ಲಿ ಮತ್ತೆ ನಮ್ಮ ಸರ್ಕಾರ ರಚನೆ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆಗೆ ಬೆಂಬಲ ಸೂಚಿಸಿದ್ದ NCP ಶಾಸಕರು, ಶಿವಸೇನೆಯ ಶಾಸಕರೆಲ್ಲ ಮತ್ತೆ ತಮ್ಮ ಪಕ್ಷಕ್ಕೆ ಮರಳಲಿದ್ದಾರೆ. ಅಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆ ಆಗಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.