ಚೆನ್ನೈ: ವಿದ್ಯುತ್ ದರ ಏರಿಕೆ ಮಾಡಿರುವ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ)ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಹಂಗಾಮಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದಲ್ಲಿ ಪ್ರಮುಖ ಪ್ರತಿಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು.
ಮಾಜಿ ಸಚಿವರು ಸೇರಿದಂತೆ ಎಐಎಡಿಎಂಕೆ ಕಾರ್ಯಕರ್ತರು ತಮ್ಮ ತಮ್ಮ ಪ್ರದೇಶಗಳಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಹೊಸ ವಿದ್ಯುತ್ ದರವನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿದರು.

ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಳನಿಸ್ವಾಮಿ, ಡಿಎಂಕೆ ಸರ್ಕಾರವು ವಿದ್ಯುತ್ ಶುಲ್ಕವನ್ನು ಹೆಚ್ಚಿಸುವುದಲ್ಲದೆ, ಜನರ ತಲೆಯ ಮೇಲೆ ಭಾರೀ ಆಸ್ತಿ ತೆರಿಗೆಯನ್ನು ವಿಧಿಸುವ ಮೂಲಕ ಜನರ ಮೇಲೆ ಹೊರೆ ಹೇರುವುದನ್ನು ಮುಂದುವರೆಸಿದೆ ಎಂದು ದೂರಿದ್ದಾರೆ.
ಆಸ್ತಿ ತೆರಿಗೆಯನ್ನು ದೇಶೀಯ ಸಂಸ್ಥೆಗಳಿಗೆ 100% ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಸುಮಾರು 150% ವರೆಗೆ ಹೆಚ್ಚಿಸಲಾಗಿದೆ ಎಂದು ಪ್ರತಿಪಾದಿಸಿದ ಎಐಎಡಿಎಂಕೆ ನಾಯಕ, ಗುಡಿಸಲುಗಳಲ್ಲಿ ವಾಸಿಸುವ ಜನರು ಸಹ ಆಸ್ತಿ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಅಸಮಧಾನ ವ್ಯಕ್ತ ಪಡಿಸಿದರು.