Monday, June 9, 2025

ಸತ್ಯ | ನ್ಯಾಯ |ಧರ್ಮ

ಎಐಸಿಸಿ ಅಧ್ಯಕ್ಷಸ್ಥಾನ ಚುನಾವಣೆ: ಇಂದು ಮತ ಎಣಿಕೆ

ದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷಕ್ಕೆ ಸೋಮವಾರ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ನವದೆಹಲಿಯ ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ರಾಜಕೀಯ ವಲಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ಕುತೊಹಲ ಮೂಡಿಸಿದೆ.

ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿ ಚುನಾವಣೆ ನಡೆದಿದೆ. ಹಾಗೆಯೇ 22 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಸಿಗಲಿದೆ.

ಈ ಚುನಾವಣೆಯಲ್ಲಿ ಶೇ 96ರಷ್ಟು ಮತದಾನವಾಗಿತ್ತು. ಇದರಲ್ಲಿ 9,915 ಪ್ರತಿನಿಧಿಗಳ ಪೈಕಿ 9,500 ಪ್ರತಿನಿಧಿಗಳು ತಮ್ಮ ಹಕ್ಕು ಚಲಾಯಿಸಿದ್ದರು. ಅದರಲ್ಲಿ 501 ಮತಗಳು ರಾಜ್ಯದಿಂದ ಚಲಾವಣೆಗೊಂಡಿದ್ದವು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page