Thursday, June 19, 2025

ಸತ್ಯ | ನ್ಯಾಯ |ಧರ್ಮ

ಬೆಂಗಳೂರು- ಶಿವಮೊಗ್ಗ ನಡುವೆ ವಿಮಾನಯಾನ ಸಂಚಾರ ಆರಂಭ

ಶಿವಮೊಗ್ಗ,ಅಗಸ್ಟ್‌.31: ಶಿವಮೊಗ್ಗ ವಿಮಾನ ನಿಲ್ದಾನ ಕಾರ್ಯಾರಂಭ ಮಾಡಿದ್ದು ತನ್ನ ಮೊದಲ ವಿಮಾನ ಇಂಡಿಗೋವನ್ನು ಬರಮಾಡಿಕೊಂಡಿದೆ. ವಿಮಾನಯಾನ ಸೇವೆಗಳ ಮೊದಲ ಹೆಜ್ಜೆಯಾಗಿ ಇಂಡಿಗೋ ಸಂಸ್ಥೆಯ ವಿಮಾನವು ಗುರುವಾರ ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05ಕ್ಕೆ ಮಲೆನಾಡಿನ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ ಇಂಡಿಗೊ ವಿಮಾನದಲ್ಲಿ ಸಚಿವ ಎಂಬಿ ಪಾಟೀಲ್‌ ಜೊತೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ, ಶಾಸಕ ಅರಗ ಜ್ಞಾನೇಂದ್ರ , ಬಿ ವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ, ಹಾಲಪ್ಪ , ಶ್ರೀಮತಿ ಭಾರತಿಶೆಟ್ಟಿ, ಸೇರಿದಂತೆ ಹಲವರಿಂದ ಮೊದಲ ಪ್ರಯಾಣ ಮಾಡಿದರು.

ಎಲ್ಲಿದೆ ಈ ಏರ್‌ಪೋರ್ಟ್?
ಇದು ರಾಜ್ಯದ ಮಲೆನಾಡು ಪ್ರಥಮ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, ಇದರ ನಿರ್ಮಾಣಕ್ಕೆ 450 ಕೋಟಿ ರುಪಾಯಿ ವಿನಿಯೋಗಿಸಲಾಗಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್‌ಪೋರ್ಟ್ ನಿರ್ಮಾಣವಾಗಿದೆ.
ಇಲ್ಲಿ ಏರ್‌ ಬಸ್‌ ಮಾದರಿಯ ವಿಮಾನಗಳೂ ಬಂದಿಳಿಯುವ ವ್ಯವಸ್ಥೆ ಮಾಡಲಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಉಪಯೋಗವಾಗಲಿದೆ.
ಯೋಜನೆಯ ಆರಂಭಲ್ಲಿ ಇಲ್ಲಿ ನೈಟ್‌ ಲ್ಯಾಂಡಿಂಗ್‌ ವ್ಯವಸ್ಥೆ ಇರಲಿಲ್ಲ. ಆದರೆ ಈಗ ಈ ವ್ಯವಸ್ಥೆಯನ್ನೂ ಕಲ್ಪಸಲಾಗಿದೆ. 4,340 ಚದರ ಮೀಟರ್‌ ವಿಸ್ತೀರ್ಣದಲ್ಲಿ ಪ್ರಯಾಣಿಕರ ಟರ್ಮಿನಲ್‌ ಹಾಗೂ 3,050 ಮೀಟರ್‌ ಉದ್ದದ ರನ್‌ವೇ ನಿರ್ಮಿಸಲಾಗಿದೆ.

ಬೃಹತ್ ನಗರಗಳಿಗಿದೆ ಇಲ್ಲಿಂದ ಫ್ಲೈಟ್!
ಈಗಾಗಲೇ ಕಾರ್ಯಾರಂಭವಾಗಿರುವ ಈ ವಿಮಾನ ನಿಲ್ದಾನದಿಂದ ದೆಹಲಿ, ಮುಂಬೈ, ಹೈದರಾಬಾದ್, ಚೆನ್ನೈ, ಗೋವಾ ಮುಂತಾದ ನಗರಗಳಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ಯೋಜನೆಯಿದೆ. ತಕ್ಷಣಕ್ಕೆ ಬೆಂಗಳೂರಿನಲ್ಲಿ ಈ ಸ್ಥಳಗಳಿಗೆ ಕನೆಕ್ಕಿಂಗ್ ವಿಮಾನಗಳು ಇದ್ದು, ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ವಿಸ್ತರಿಸಲು ಈಗಾಗಲೇ ಕರೆಯಲಾಗಿರುವ ಟೆಂಡರ್ ಅಂತಿಮ ಹಂತದಲ್ಲಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page