ದೆಹಲಿ: ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರು ತಮ್ಮ ವಿಮಾನಗಳ ನಿರ್ಗಮನ ಸಮಯಕ್ಕಿಂತ ಮೂರು ಗಂಟೆಗಳ ಮೊದಲು ವಿಮಾನ ನಿಲ್ದಾಣಗಳಿಗೆ ಬರುವಂತೆ ಕೇಳಿಕೊಂಡಿವೆ. ಪಾಕಿಸ್ತಾನದೊಂದಿಗಿನ ಯುದ್ಧದ ನಂತರ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಸರ್ಕಾರವು ಭದ್ರತೆಯನ್ನು ಬಿಗಿಗೊಳಿಸಿರುವುದರಿಂದ ಇಂಡಿಗೋ, ಆಕಾಶ ಏರ್ ಮತ್ತು ಏರ್ ಇಂಡಿಯಾ ಸೇರಿದಂತೆ ಹಲವಾರು ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಲ್ಲಿ ಮನವಿ ಮಾಡಿವೆ.
ವಿಮಾನ ಹೊರಡುವ 75 ನಿಮಿಷಗಳ ಮೊದಲು ಚೆಕ್-ಇನ್ ಮುಕ್ತಾಯಗೊಳ್ಳುತ್ತದೆ ಎಂದು ಏರ್ ಇಂಡಿಯಾ ಘೋಷಿಸಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ನಿರ್ದೇಶನಗಳನ್ನು ಅನುಸರಿಸಿ ವಿಮಾನಯಾನ ಸಂಸ್ಥೆಗಳು ಈ ಸಲಹೆಯನ್ನು ನೀಡಿವೆ. ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಸಂದರ್ಶಕರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ಬಿಸಿಎಎಸ್ ಘೋಷಿಸಿದೆ.
ಭದ್ರತಾ ವ್ಯವಸ್ಥೆಗಳನ್ನು ಸುಧಾರಿಸುವ ಭಾಗವಾಗಿ, BCAS ಎಲ್ಲಾ ವಿಮಾನಗಳಿಗೆ ದ್ವಿತೀಯ ಲ್ಯಾಡರ್ ಪಾಯಿಂಟ್ ತಪಾಸಣೆಯನ್ನು ಕಡ್ಡಾಯಗೊಳಿಸಿದೆ.
“ದೇಶದಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ತಡೆಗಟ್ಟಲು ವಿಮಾನ ನಿಲ್ದಾಣಗಳು, ವಾಯುನೆಲೆಗಳು, ವಾಯುಪಡೆಯ ನಿಲ್ದಾಣಗಳು, ಹೆಲಿಪ್ಯಾಡ್ಗಳು, ವಾಯುಯಾನ ತರಬೇತಿ ಕೇಂದ್ರಗಳು ಸೇರಿದಂತೆ ಎಲ್ಲಾ ನಾಗರಿಕ ವಿಮಾನಯಾನ ಸೌಲಭ್ಯಗಳಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ನಾವು ನಿರ್ಧರಿಸಿದ್ದೇವೆ” ಎಂದು ಬಿಸಿಎಸಿ ತಿಳಿಸಿದೆ.