Friday, June 20, 2025

ಸತ್ಯ | ನ್ಯಾಯ |ಧರ್ಮ

ಮಹಾರಾಷ್ಟ್ರ ಸರಕಾರದ ದೋಣಿಯಿಂದ ಕಾಲು ಹೊರಗಿಟ್ಟ ಅಜಿತ್ ಪವಾರ್

ನಾಳೆ ಈ ಹುದ್ದೆ ಇರುತ್ತೋ ಇಲ್ವೋ ಗೊತ್ತಿಲ್ಲ ಎಂದ ಪವಾರ್

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಯಾವಾಗಲೂ ಕುತೂಹಲಕರವಾಗಿರುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗೈರು ಹಾಜರಾಗಿರುವುದು ಹೊಸ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಅದೇ ದಿನ ಪುಣೆಯ ಬಾರಾಮತಿಯಲ್ಲಿ ಸಹಕಾರಿ ಕ್ಷೇತ್ರಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಜಿತ್ ಪವಾರ್ ಮಾತನಾಡಿ, ಸಕ್ಕರೆ ಕಾರ್ಖಾನೆಗಳು ಆರ್ಥಿಕವಾಗಿ ಸದೃಢವಾಗಬೇಕು ಎಂದು ಈ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಹೇಳುತ್ತಿರುವಾಗಲೇ, “ಇಂದು ನಾನು ಹಣಕಾಸು ಸಚಿವನಾಗಿದ್ದೇನೆ. ಈ ಪೋಸ್ಟ್ ನಾಳೆ ಇರತ್ತೋ ಇಲ್ಲವೋ ಗೊತ್ತಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ. ಅಜಿತ್ ಪವಾರ್ ಸಾರ್ವಜನಿಕವಾಗಿ ಈ ಕಾಮೆಂಟ್ ಮಾಡುತ್ತಿದ್ದಂತೆ, ಆಡಳಿತಾರೂಢ ಬಿಜೆಪಿ-ಶಿವಸೇನೆ ಸರ್ಕಾರದಲ್ಲಿ ಏನೋ ಎಡವಟ್ಟಾಗಿದೆ ಎಂಬ ಅನುಮಾನಗಳು ಬಲಗೊಳ್ಳುತ್ತಿವೆ.

ಪುಣೆಯ ಕಾರ್ಯಕ್ರಮದಲ್ಲಿ ತಮ್ಮ ಸ್ಥಾನದ ಬಗ್ಗೆ ಅನಿಶ್ಚಿತತೆಯನ್ನು ವ್ಯಕ್ತಪಡಿಸಿದ ಅವರು, ಅಮಿತ್ ಶಾ ಕಾರ್ಯಕ್ರಮಕ್ಕೆ ಗೈರುಹಾಜರಾದ ಬಗ್ಗೆಯೂ ಪ್ರತಿಕ್ರಿಯಿಸಿದರು. ಇಂದು ನನಗೆ ಬೇರೆ ಕಾರ್ಯಕ್ರಮಗಳಿವೆ ಎಂದು ಅಮಿತ್ ಶಾ ಕಚೇರಿಗೆ ಮೊದಲೇ ತಿಳಿಸಿದ್ದೇನೆ ಎಂದು ಹೇಳಿದರು. ಈ ನಡುವೆ ಇಂದು ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನವಿಸ್ ಅವರ ಮನೆಗಳಲ್ಲಿ ಗಣೇಶನ ದರ್ಶನ ಪಡೆದರು.

https://x.com/AbhijitKaran25/status/1706142501583909184?s=20

ಇತ್ತೀಚೆಗಷ್ಟೇ ಅಜಿತ್ ಪವಾರ್ ಅವರು ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಮೀಸಲಾತಿ ನೀಡುವಂತೆ ಸರಕಾರವನ್ನು ಕೋರಿದ್ದರು. ಆಡಳಿತಾರೂಢ ಪಾಲುದಾರರಾದ ಬಿಜೆಪಿ ಮತ್ತು ಶಿವಸೇನೆಗೆ ಇದು ಇಷ್ಟವಿಲ್ಲ ಎಂಬ ವಾದಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವರು ಈ ಮಾತುಗಳನ್ನು ಆಡಿರಬಹುದು ಎಂದು ಅವರ ಮಾತುಗಳನ್ನು ವಿಶ್ಲೇಷಿಸುತ್ತಿರುವ ರಾಜಕೀಯ ತಜ್ಞರು ಹೇಳುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page