Monday, June 17, 2024

ಸತ್ಯ | ನ್ಯಾಯ |ಧರ್ಮ

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಸರ್ವ ಸದಸ್ಯರ ಸಭೆ ಇಂದು

ಬೆಂಗಳೂರು: ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯು ಸೆಪ್ಟಂಬರ್‌ 18 (ಭಾನುವಾರ) ಕ್ವೀನ್ಸ್‌ ರಸ್ತೆಯ ಕೃಷಿ ತಂತ್ರಜ್ಙರ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.

ಈ ಕುರಿತು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಕಾರ್ಯದರ್ಶಿ ಎಸ್. ತೇಜಸ್ವಿನಿ ಅವರು ಮಾಹಿತಿ ನೀಡಿದ್ದು, ಸಭೆಯಲ್ಲಿ ಸದಸ್ಯರ ಹಾಗೂ ಸಹಸದಸ್ಯರ ಪ್ರತಿಭಾವಂತ ಮಕ್ಕಳನ್ನು ಸಂಘವು ಗೌರವಿಸಲಿದೆ. ರಾಘವೇಂದ್ರ ಕೆ. ತೊಗರ್ಸಿ ಅವರು ಈ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದು, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಿರುತೆರೆಯ ನಟ ಸಾಗರ್‌ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು