ಹಾಸನ : ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಬಸವೇಶ್ವರರ ಜಯಂತಿ
ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೆ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀ ಬಸವೇಶ್ವರರ ಭಾವಚಿತ್ರಗಳಿಗೆ ಭಾಗವಹಿಸಿದ್ದ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಬಿ ಮದನ ಗೌಡ ಮಾತನಾಡಿ, ಯಾವುದೇ ಮಹನೀಯರ, ದಾರ್ಶನಿಕರ ಜಯಂತಿ ಆಚರಿಸಬಾರದು ಎಂದು ಸಂಘದ ಬೈಲಾದಲ್ಲಿ ಇಲ್ಲ. ಹಾಗಾಗಿ ಮೇರು ನಾಯಕರ ಜಯಂತಿ ಯನ್ನು ಪತ್ರಕರ್ತರ ಸಂಘದಲ್ಲಿ ಆಚರಿಸು ವುದು, ಆ ಮೂಲಕ ಅವರ ಸಂದೇಶ ಮನನ ಮಾಡಿ ಕೊಳ್ಳುವುದು ಒಳ್ಳೆಯ ಬೆಳವಣಿಗೆ. ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಜಾತ್ಯತೀತ ಆಲೋಚನೆಯೊಂದಿಗೆ ಡಾ. ಅಂಬೇಡ್ಕರ್ ಹಾಗೂ ಬಸವೇಶ್ವರರ ಜಯಂತಿ ಆಚರಣೆ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ ಎಂದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಹೆಚ್. ವೇಣು ಕುಮಾರ್ ಮಾತನಾಡಿ, ಪತ್ರಿಕೋದ್ಯಮಕ್ಕೆ ಯಾವುದೇ ಸೆಕ್ಷನ್ ಇಲ್ಲ. ಆದರೆ ಪತ್ರಕರ್ತರಿಗೆ ಮಾತನಾಡುವ ವಾಕ್ ಸ್ವಾತಂತ್ರ÷್ಯ ಸಿಕ್ಕಿದ್ದು ಅಂಬೇಡ್ಕರ್ ರಚನೆ ಮಾಡಿರುವ ಸಂವಿಧಾನದಿಂದ. ಅವರಿಂದ ನಾವು ನಿರ್ಭಿಡೆಯಿಂದ ಮಾತನಾಡುವ ದನಿ ಬಂದಿದೆ ಎಂದರು. ಬಸವಣ್ಣ ಅವರು 12ನೇ ಶತಮಾನದಲ್ಲೇ ಜಾತಿ ವ್ಯವಸ್ಥೆ ವಿರುದ್ದ ಹೋರಾಡಿ ಸಮ ಸಮಾಜ ನಿರ್ಮಾಣಕ್ಕಾಗಿ ಅನುಭವ ಮಂಟಪ ಮೂಲಕ ಶ್ರಮಿಸಿದರು ಎಂದು ನೆನಪಿಸಿದರು. ಅಂಬೇಡ್ಕರ್ ವಿರಚಿತ ಸಂವಿಧಾನ ಈ ನೆಲದ ಶಕ್ತಿ. ಪ್ರತಿಯೊಬ್ಬರೂ ಅವರನ್ನು ಗೌರವಿಸು ತ್ತಾರೆ. ಆದರೆ ಕೆಲವರು ಅಂಬೇಡ್ಕರ್ ಅವರನ್ನು ಸೀಮಿತಗೊಳಿಸಿ ಕೇವಲ ಹೆಸರು ಬಳಕೆ ಮಾಡಿಕೊಳ್ಳು ತ್ತಿರುವುದಕ್ಕೆ ನನ್ನ ವಿರೋಧ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಿ.ಕೆ. ಮಂಜಯ್ಯ ಅವರನ್ನು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಬಿ.ಆರ್. ಉದಯಕುಮಾರ್, ಬಾಳುಗೋಪಾಲ್, ಲೀಲಾವತಿ, ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಶಿಧರ್, ಸಂಪಾದಕರಾದ ಕೆ.ಪಿ.ಎಸ್ .ಪ್ರಮೋದ್, ಬಿ.ಸಿ. ಚೌಡುವಳ್ಳಿ ಜಗದೀಶ್, ವಿವಿಧ ಪತ್ರಿಕೆಗಳ ಸಂಪಾದಕರು, ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಹೆಚ್.ಟಿ. ಮೋಹನ್ ಕುಮಾರ್ ಎಲ್ಲರನ್ನೂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ ಮಾಡಿದರು. ಮತ್ತೋರ್ವ ಉಪಾಧ್ಯಕ್ಷ ಕೆ.ಎಂ. ಹರೀಶ್