Sunday, June 22, 2025

ಸತ್ಯ | ನ್ಯಾಯ |ಧರ್ಮ

ಇಂದಿರಾಗಾಂಧಿ ಮತ್ತೆ ಹುಟ್ಟಿ ಬಂದರೂ 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಮುಂಬೈ: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಮರಳಿ ಬಂದರೂ 370ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬುಧವಾರ ಧುಲೆ, ಪರ್ಬನಿ ಮತ್ತು ಜಲಗಾಂವ್‌ನಲ್ಲಿ ಮಹಾಯುತಿ ಪರವಾಗಿ ಅಮಿತ್ ಶಾ ಪ್ರಚಾರ ನಡೆಸಿದರು.

ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ವಿರುದ್ಧ ವಾಗ್ದಾಳಿ ನಡೆಸಿದರು. ಮುಸ್ಲಿಮರು ದಲಿತರು, ಆದಿವಾಸಿಗಳು ಮತ್ತು ಇತರ ಹಿಂದುಳಿದ ಜಾತಿಗಳಿಗೆ ಮೀಸಲಾದ ಮೀಸಲಾತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page