Friday, June 20, 2025

ಸತ್ಯ | ನ್ಯಾಯ |ಧರ್ಮ

ದೆಹಲಿ ಚುನಾವಣೆ: ಎಎಪಿ ಸೋಲಿನ ನಡುವೆಯೇ ಅಣ್ಣಾ ಹಜಾರೆ ಪ್ರತಿಕ್ರಿಯೆ; ಕೇಜ್ರಿವಾಲ್ ವಿರುದ್ಧ ಕಿಡಿ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆಯೇ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾತನ್ನು ಹರಿಬಿಟ್ಟಿದ್ದಾರೆ. ಕೇಜ್ರಿವಾಲ್ ನನ್ನ ಮಾತು ತಪ್ಪಿ ನಡೆದ ಪರಿಣಾಮ ಈ ಸೋಲು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಕ್ಕೆ ಕಿವಿಗೊಡಲಿಲ್ಲ ಮತ್ತು ಮದ್ಯದ ಮೇಲೆ ಮಾತ್ರ ಗಮನ ಹರಿಸಿದ್ದಾರೆ ಎಂದು ಹೇಳಿದರು.

“ಅಭ್ಯರ್ಥಿಯ ನಡವಳಿಕೆ ಮತ್ತು ಆಲೋಚನೆಗಳು ಶುದ್ಧವಾಗಿರಬೇಕು, ಜೀವನವು ದೂಷಣೆಯಿಲ್ಲದೆ ಇರಬೇಕು ಮತ್ತು ತ್ಯಾಗ ಇರಬೇಕು ಎಂದು ನಾನು ಯಾವಾಗಲೂ ಹೇಳಿದ್ದೇನೆ. ಈ ಗುಣಗಳು ಮತದಾರರಿಗೆ ಅವರ ಮೇಲೆ ನಂಬಿಕೆ ಇಡಲು ಅನುವು ಮಾಡಿಕೊಡುತ್ತದೆ” ಎಂದು ಅಣ್ಣಾ ಹಜಾರೆ ಹೇಳಿದರು.

“ನಾನು ಇದನ್ನು ಅರವಿಂದ್ ಕೇಜ್ರಿವಾಲ್ ಅವರಿಗೆ ಹೇಳಿದೆ. ಆದ್ರೆ, ಅವರು ಗಮನ ಹರಿಸಲಿಲ್ಲ, ಮತ್ತು ಅಂತಿಮವಾಗಿ, ಅವರು ಮದ್ಯದ ಮೇಲೆ ಗಮನ ಹರಿಸಿದರು. ಈ ಸಮಸ್ಯೆ ಏಕೆ ಉದ್ಭವಿಸಿತು? ಅವರು ಹಣದ ಶಕ್ತಿಯಿಂದ ಮುಳುಗಿದ್ದರು” ಎಂದು ಅಣ್ಣಾ ಹಜಾರೆ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page