ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅಣ್ಣಾ ಯೂನಿವರ್ಸಿಟಿ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಡಿಎಂಕೆ ಸರ್ಕಾರದದ ನಡೆಯನ್ನು ಖಂಡಿಸಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಭರವಸೆಯಂತೆ ಆರು ಬಾರಿ ಚಾಟಿಯಿಂದ ತಮ್ಮನ್ನು ತಾವು ದಂಡಿಸಿಕೊಂಡಿದ್ದಾರೆ.
ಅಣ್ಣಾಮಲೈ ಸಾರ್ವಜನಿಕವಾಗಿ ದಂಡಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಸಿರು ‘ಮುಂಡು’ ಧರಿಸಿ, ಶರ್ಟ್ ರಹಿತವಾಗಿ ಅಣ್ಣಾಮಲೈ ಮಾಧ್ಯಮ ಪ್ರತಿನಿಧಿಗಳು ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರ ಸಮ್ಮುಖದಲ್ಲಿ ಉದ್ದವಾದ, ಬಿಳಿ ಚಾವಟಿಯಿಂದ ತನ್ನನ್ನು ತಾನೇ ಹೊಡೆದುಕೊಂಡರು. “ನಿಮಗೆ ನಾಚಿಕೆ ಇಲ್ಲವೇ ಸ್ಟಾಲಿನ್?”, “ಆರೋಪಿ ಜ್ಞಾನಶೇಖರನ್ ಅವರನ್ನು ಗಲ್ಲಿಗೇರಿಸಿ” ಎಂಬ ಘೋಷಣೆಗಳ ಫಲಕಗಳನ್ನು ಬಿಜೆಪಿ ಬೆಂಬಲಿಗರು ಹಿಡಿದುಕೊಂಡಿದ್ದರು.
ಸ್ವಯಂ ಚಾಟಿ ಬೀಸಿಕೊಂಡ ಬಳಿಕ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ತಮಿಳು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವ ಯಾರಿಗಾದರೂ ಈ ಆಚರಣೆಗಳು ‘ಮಾರ್ಗಗಳು’ ಎಂದು ತಿಳಿಯುತ್ತದೆ ಎಂದು ಅವರು ಹೇಳಿದರು.
“ನಮ್ಮನ್ನು ನಾವೇ ಹೊಡೆದುಕೊಳ್ಳುವುದು, ನಮ್ಮನ್ನು ನಾವೇ ಶಿಕ್ಷಿಸಿಕೊಳ್ಳುವುದು, ಅತ್ಯಂತ ಕಠಿಣವಾದ ಆಚರಣೆಗಳ ಮೂಲಕ ನಮ್ಮನ್ನು ನಾವು ದಂಡಿಸಿಕೊಳ್ಳುವುದು ಇತ್ಯಾದಿಗಳು ಈ ಸಂಸ್ಕೃತಿಯ ಭಾಗವಾಗಿದೆ. ಇದು ಯಾವುದೇ ವ್ಯಕ್ತಿಯ ವಿರುದ್ಧ ಅಲ್ಲ ಅಥವಾ ಯಾವುದರ ವಿರುದ್ಧವೂ ಅಲ್ಲ. ಇದು ರಾಜ್ಯದಲ್ಲಿ ಆಗುತ್ತಿರುವ ನಿರಂತರ ಅನ್ಯಾಯದ ವಿರುದ್ಧ. ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವುದು ಒಂದು ಟಿಪ್ಪಿಂಗ್ ಪಾಯಿಂಟ್ ಮಾತ್ರ” ಎಂದರು.
“ನನ್ನ ಅನೇಕ ಪೂರ್ವಜರು ಈ ಮಾರ್ಗದಲ್ಲಿ ನಡೆದಿದ್ದಾರೆ; ನಾನು ಕೂಡ ಅದನ್ನು ಆರಿಸಿಕೊಂಡಿದ್ದೇನೆ. ಇದು ಉನ್ನತ ಶಕ್ತಿಗೆ ಶರಣಾಗುವ, ದೇವರಿಗೆ ಶರಣಾಗುವ ಪ್ರಕ್ರಿಯೆಯಾಗಿದೆ” ಎಂದು ಬಿಜೆಪಿ ರಾಜ್ಯ ಮುಖ್ಯಸ್ಥರು ಹೇಳಿದ್ದಾರೆ.
“ಡಿಎಂಕೆಯ ಆಡಳಿತದ ಅದಕ್ಷತೆಯಿಂದ ಸಾಮಾನ್ಯ ಜನರು ಪ್ರತಿದಿನ ತೊಂದರೆಗೊಳಗಾಗುತ್ತಿದ್ದಾರೆ. ನನ್ನ ಚಪ್ಪಲಿಗಳನ್ನು ತೆಗೆದುಹಾಕುವ ಬಗ್ಗೆ, ನಾನು ಸಾಕಷ್ಟು ಪರಿಗಣನೆಯ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಪಕ್ಷ ಮತ್ತು ಕಾರ್ಯಕರ್ತರು ಮಾಡಿದ ಎಲ್ಲ ಶ್ರಮದ ನಂತರ, ನೀವು ದೊಡ್ಡ ಶಕ್ತಿಗೆ ನಿಮ್ಮನ್ನು ಒಪ್ಪಿಸುವುದು ಮತ್ತು ನಡೆಯುತ್ತಿರುವ ವಿಷಯಗಳನ್ನು ನೋಡಿಕೊಳ್ಳಲು ದೊಡ್ಡ ಶಕ್ತಿಗೆ ಬಿಡುವುದು ಸಹ ಮುಖ್ಯವಾಗಿದೆ ಎಂದು ನಾನು ನಂಬುತ್ತೇನೆ” ಎಂದು ಅವರು ಹೇಳಿದ್ದಾರೆ.
“