ರಾಜ್ಯದಲ್ಲಿ ಮತ್ತೊಂದು ಬಾಣಂತಿ ತಾಯಿಯ ನಿಧನ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಮಹಿಳೆಯೊಬ್ಬರು ಸಿ-ಸೆಕ್ಷನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೇವಲ ಒಂದೇ ದಿನಕ್ಕೆ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಭಾನುವಾರ ನಿಧನರಾದರು.
ವೈದ್ಯಕೀಯ ನಿರ್ಲಕ್ಷ್ಯವೇ ಆಕೆಯ ಸಾವಿಗೆ ಕಾರಣವಾಗಿದೆ ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ. 28 ವರ್ಷದ ತಾಯಿ ವೈಶಾಲಿ ಕೊಟಬಾಗಿ ಶನಿವಾರ ಬಿಮ್ಸ್ನ ಲೇಬರ್ ವಾರ್ಡ್ಗೆ ದಾಖಲಾಗಿದ್ದು, ಯಶಸ್ವಿಯಾಗಿ ತನ್ನ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ಭಾನುವಾರ ಬೆಳಗಿನ ಜಾವದವರೆಗೂ ವೈಶಾಲಿಯ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು ಎಂದು ಆಕೆಯ ಅತ್ತೆ ಈರವ್ವ ತಿಳಿಸಿದ್ದಾರೆ. ಆದಾಗ್ಯೂ, ಬೆಳಿಗ್ಗೆ 7 ಗಂಟೆಯ ಸುಮಾರಿಗೆ, ವೈಶಾಲಿ ಎದೆನೋವು ಎಂದು ತಿಳಿಸಿದ್ದಾರೆ. ತಿಳಿಸಿ ಹಲವು ಹೊತ್ತಾದರೂ ಚಿಕಿತ್ಸೆಗೆ ತಡ ಮಾಡಿದ್ದೇ ಆಕೆಯ ಸಾವಿಗೆ ಕಾರಣ ಎನ್ನಲಾಗಿದೆ.
ಬೆಳಿಗ್ಗೆ 7 ಗಂಟೆಯ ಸುಮಾರಿಗೆ, ವೈಶಾಲಿ ಎದೆನೋವಿನ ಬಗ್ಗೆ ದೂರು ನೀಡಲು ಪ್ರಾರಂಭಿಸಿದರು. ಆ ನೋವು ವೇಗವಾಗಿ ಉಲ್ಬಣಗೊಂಡಿದೆ. ಕೆಲವು ಸಮಯದ ನಂತರ ಆಕೆಯನ್ನು ಐಸಿಯುಗೆ ವರ್ಗಾಯಿಸಲಾಯಿತು, ಆದರೆ ಆಕೆಯ ಸ್ಥಿತಿಯು ಹದಗೆಡುತ್ತಲೇ ಇತ್ತು.
ಹಾಜರಾದ ವೈದ್ಯರು ಎದೆನೋವಿಗೆ ಚಿಕಿತ್ಸೆ ನೀಡಿ ಆಕೆಯ ಜೀವ ಉಳಿಸಲು ಎಲ್ಲ ಪ್ರಯತ್ನಗಳನ್ನು ಮಾಡಿದ್ದಾರೆ ಎಂದು ಅವರು ದೃಢಪಡಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಮ್ಸ್ ನಿರ್ದೇಶಕ ಡಾ.ಅಶೋಕ್ ಕುಮಾರ್ ಶೆಟ್ಟಿ, ಆಕೆಯ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯಕ್ಕಿಂತ ಹೃದಯ ಸಂಬಂಧಿ ತೊಡಕುಗಳೇ ಕಾರಣ ಎಂದು ಹೇಳಿದ್ದಾರೆ.
ವೈಶಾಲಿ ಕುಟುಂಬದ ದೂರಿನ ಮೇರೆಗೆ ಆಂತರಿಕ ತನಿಖೆ ನಡೆಸಲಾಗುವುದು ಎಂದು ಡಾ.ಶೆಟ್ಟಿ ಭರವಸೆ ನೀಡಿದ್ದಾರೆ.
ಕರ್ನಾಟಕದಲ್ಲಿ ಕಳೆದ ಐದು ವರ್ಷಗಳಲ್ಲಿ 3,350 ತಾಯಂದಿರ ಸಾವುಗಳು ಸಂಭವಿಸಿವೆ ಎಂದು ಮುಖ್ಯಮಂತ್ರಿಗಳ ಕಚೇರಿ ಸೋಮವಾರ ತಿಳಿಸಿದೆ. ಸರ್ಕಾರ ನೀಡಿದ ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ ಸಾವುನೋವುಗಳು ಇಳಿಮುಖವಾಗಿವೆ.