Home ಬ್ರೇಕಿಂಗ್ ಸುದ್ದಿ ಹಾಸನ ಮುಸ್ಲಿಂ ಸಮಾಜ ವಿರುದ್ಧ ಅವಹೇಳನ ಹೇಳಿಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸ್ಥಾನ ಅನರ್ಹಕ್ಕೆ ಆಗ್ರಹಿಸಿ ಮನವಿ

ಮುಸ್ಲಿಂ ಸಮಾಜ ವಿರುದ್ಧ ಅವಹೇಳನ ಹೇಳಿಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸ್ಥಾನ ಅನರ್ಹಕ್ಕೆ ಆಗ್ರಹಿಸಿ ಮನವಿ

ಹಾಸನ : ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರವರು ಅಲ್ಪಸಂಖ್ಯಾತ ಮುಸ್ಲಿಂ ಸಮಾಜವನ್ನು ಅವಹೇಳನ ಮಾಡಲಾಗಿದ್ದು, ಇದನ್ನ ವಿರೋಧಿಸಿ ಕೂಡಲೇ ಪಕ್ಷದಿಂದ ಉಚ್ಛಾಟಿಸಲು ಹಾಗೂ ಶಾಸಕ ಸ್ಥಾನದಿಂದ ಅನರ್ಹ ಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಅಲ್ಪಸಂಖ್ಯಾತರ ಹಿತರಕ್ಷಣಾ ವೇಧಿಕೆಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.


ವೀರಕನ್ನಡಿಗ ಟಿಪ್ಪು ಸೇನೆಯ ಪದಾಧಿಕಾರಿ ಅಕ್ಮಲ್ ಪಾಷಾ ಮಾಧ್ಯಮದೊಂದಿಗೆ ಮಾತನಾಡಿ, ಇದೆ ವೇಳೆ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರವರು ಸಾರ್ವಜನಿಕವಾಗಿ ಬಹಿರಂಗವಾಗಿ ಮುಸಲ್ಮಾನ್ ಸಮಾಜದ (ಸಾಬರ) ರವರಿಗೆ ಬಗರ್‌ಹುಕ್ಕಂ ಯೋಜನೆಯಡಿ ಕೆಲವು ಮುಸ್ಲಿಂಸಮಾಜದವರು ಸಂಬಂಧಪಟ್ಟ ವರ ಇಲಾಖೆ ಅಧಿಕಾರಿಗಳಲ್ಲಿ ದಾಖಲೆ ಮಾಡಿಕೊಡಲು ಅರ್ಜಿ ಸಲ್ಲಿಸದನ್ನು ಅಧಿಕಾರಿಗಳಿಗೆ ಪ್ರಶ್ನೆ ಮಾಡುತ್ತಿರುವ ಶಾಸಕರು ಬಹಿರಂಗವಾಗಿ ಸಾಬರ್‌ಗೆ ಬಗರ್‌ಹುಕ್ಕುಂ ಸರ್ಕಾರಿ ಜಮೀನಿಗೆ ಸಂಬಂಧಿಸಿ ಯಾರಾದರೂ ದಾಖಲೆ ಮಾಡಿಕೊಟ್ಟರೆ ಅಂತಹವರನ್ನು ನೇಣಿಗೆ ಹಾಕುತ್ತೇನೆಂದು ಸಂವಿಧಾನ ವಿರೋಧಿ ಹಾಗೂ ಅಲ್ಪಸಂಖ್ಯಾತರ ವಿರೋಧಿ ಹೇಳಿಕೆಯಾಗಿದೆ. ಇದು ಕೇವಲ ಹೇಳಿಕೆಯಲ್ಲಿ ಭಾರತದ ಸಂವಿಧಾನತ್ಮಕ ಮೌಲ್ಯಗಳ ಧರ್ಮನಿರಾಪೇಕ್ಷತೆಯ ವಿರುದ್ಧ ನೇರ ದಾಳಿಯಾಗಿದೆ ಎಂದು ದೂರಿದರು. ಇದನ್ನು ರಾಜ್ಯಾದ್ಯಾಂತ ಮುಸ್ಲಿಂ ಸಮುಧಾಯ ತೀವ್ರವಾಗಿ ಖಂಡಿಸುತ್ತದೆ.

ಶಾಸಕಾಂಗದ ಸ್ಥಾನದಲ್ಲಿರುವ ಶಾಸಕರೊಬ್ಬರು ಸಂವಿಧಾನದ ಅನುಚ್ಛೇಧ 51ಎ ಕಂಡಿಕೆ (ಈ)ನ ಪ್ರಕಾರ ದೇಶದ ಎಲ್ಲಾ ಧಾರ್ಮಿಕ ಭಾಷಾ ಮತ್ತು ಪ್ರಾದೇಶಿಕ ಅಥವಾ ಜಾತಿ ಪಂಗಡಗಳ ಭೇದ ಭಾವದಿಂದ ಅತೀತವಾಗಿ ಭಾರತದ ಎಲ್ಲಾ ಜನತೆಯಲ್ಲಿ ಸಾಮರಸ್ಯವನ್ನು ಮತ್ತು ಸಮಾನ ಭ್ರಾತೃತ್ವವನ್ನು ಬೆಳೆಸುಬದಲು, ಸಾಮರಸ್ಯ ಹದಗೆಡಸುವ ಹಾಗೂ ಸಮಾಜದಲ್ಲಿ ಆಶಾಂತಿ ಸೃಷ್ಟಿಸು ವ ಅವ್ಯಾಚ್ಯ ಪದಗಳನ್ನು ಬಲಪ್ರಯೋಗ ಮಾಡಿ ಅಧಿಕಾರಿ ವೃಂದದವರಲ್ಲಿ ಪ್ರಚೋದನೆಯನ್ನು ಹುಟ್ಟು ಹಾಕುವುದರೊಂದಿಗೆ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಹಾಗೂ ಈ ದೇಶದ ಕಟ್ಟಕಡೆಯ ಪ್ರಜೆಯೂ ಸಹ ಈ ದೇಶದ ಆಸ್ತಿ ಎಂದು ಪರಿಗಣಿಸದಿರುವುದರ ವಿರುದ್ಧ ಖಂಡಿಸಿ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತಿಗಳು ಹಾಗೂ ಕಾಂಗ್ರೇಸ್ ಪಕ್ಷದ ರಾಜ್ಯಾ ಧ್ಯಕ್ಷರು ಕೊಡಲೆ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ರವರನ್ನು ಪಕ್ಷದಿಂದ ಉಚ್ಚಾಟಿಸಿಬೇಕು ಎಂದು ಒತ್ತಾಯಿಸಿ ಕೂಡಲೇ ಶಾಸಕ ಸ್ಥಾನದಿಂದ ಅನರ್ಹ ಗೊಳಿಸಬೇಕೆಂದು ಈ ಮೂಲಕ ತಮ್ಮಲ್ಲಿ ಮನವಿ ಮಾಡುತ್ತಿದ್ದೇವೆ. ನಮ್ಮ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸದೇ ಇದ್ದಲ್ಲಿ ರಾಜ್ಯಾದ್ಯಂತ ಪ್ರಜಾಪ್ರಭುತ್ವದಲ್ಲಿ ಪ್ರಜೇಯೇ ಮಾಲೀಕ ಎಂಬ ಧೈಯೋದ್ದೇಶದ ಅಡಿ ಯಲ್ಲಿ ಪ್ರಜಾಸತತ್ಮಾಕವಾಗಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆಯನ್ನು ನೀಡಿದರು.
ಇದೆ ವೇಳೆ ಜಿಲ್ಲಾ ಅಲ್ಪಸಂಖ್ಯಾತರ ಹಿತರಕ್ಷಣಾ ವೇಧಿಕೆಯ ಮುಖ್ಯ ಸಂಚಾಲಕ ಸಮೀರ್ ಅಹಮದ್, ಸಂಚಾಲಕ ಆಜಂಖಾನ್, ಸದಸ್ಯ ಹಿಮಾಯಾನ್, ಶಾಹನವಾಜ್, ಅಕ್ಮಲ್ ಜಾವಿದ್, ಚಾಂದ್ ಪಾಷಾ, ವಜಾದ್ ಇತರರು ಉಪಸ್ಥಿತರಿದ್ದರು.

You cannot copy content of this page

Exit mobile version