Friday, June 14, 2024

ಸತ್ಯ | ನ್ಯಾಯ |ಧರ್ಮ

ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿದ ಅರ್ಜಿ ವಿಚಾರಣೆ ಸೆ.19 ಕ್ಕೆ ಮುಂದೂಡಿಕೆ : ಸುಪ್ರೀಂಕೋರ್ಟ್

2019 ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಮತ್ತು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ.

ಈಗಾಗಲೇ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ U.U ಲಲಿತ್ ಮತ್ತು S.ರವೀಂದ್ರ ಭಟ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು CAA ಯನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕನಿಷ್ಠ 220 ಅರ್ಜಿಗಳ ವಿಚಾರಣೆಯನ್ನು ನ್ಯಾಯಪೀಠ ನಡೆಸುತ್ತಿದೆ.

CAA ವಿರುದ್ಧದ ಅರ್ಜಿಗಳು ಮೊದಲು ಡಿಸೆಂಬರ್ 18, 2019 ರಂದು ಸುಪ್ರೀಂ ಕೋರ್ಟಿಗೆ ಸಲ್ಲಿಕೆ ಆದವು. ನಂತರ ಅರ್ಜಿ ಸಲ್ಲಿಕೆಗೂ ಸುಪ್ರೀಂಕೋರ್ಟ್ ಕಾಲಾವಕಾಶ ಕೂಡಾ ನಿಗದಿ ಮಾಡಿತ್ತು. 2019 ರ ಡಿಸೆಂಬರ್ 18 ರ ನಂತರ ದೇಶಾದ್ಯಂತ ವ್ಯಾಪಕವಾಗಿ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಎದುರಿಸಿತು. ಆ ನಂತರ ಕೇಂದ್ರ ಸರ್ಕಾರ CAA ಜನವರಿ 10, 2020 ರಂದು ಜಾರಿಗೆ ತಂದಿತು.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ತೃಣಮೂಲ ಕಾಂಗ್ರೆಸ್ ಸಂಸದೆ ಮೋಹುವಾ ಮೊಯಿತ್ರಾ, ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, AIMIM ನಾಯಕ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ನಾಯಕ ದೇಬಬ್ರತ ಸೈಕಿಯಾ ಮತ್ತು ಹಲವಾರು ಎನ್‌ಜಿಒಗಳು ಮತ್ತು ಕಾನೂನು ವಿದ್ಯಾರ್ಥಿಗಳು ಸೇರಿದಂತೆ ಈ ಕಾನೂನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

2020 ರಲ್ಲಿ ಕೇರಳ ರಾಜ್ಯ ಸರ್ಕಾರವು ಈ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿತು. ಆ ಮೂಲಕ CAA ಅನ್ನು ಪ್ರಶ್ನಿಸಿದ ಮೊದಲ ರಾಜ್ಯವಾಗಿ ಗುರುತಿಸಿಕೊಂಡಿತು.

ಭಾರತದ ನೆರೆ ರಾಷ್ಟ್ರಗಳಾದ ಬಾಂಗ್ಲಾದೇಶ, ಪಾಕಿಸ್ತಾನ ಆಫ್ಘಾನಿಸ್ತಾನ, ನೇಪಾಳಗಳಿಂದ ನಾನಾ ಕಾರಣಗಳಿಂದ ಭಾರತಕ್ಕೆ ವಲಸೆ ಬಂದವರನ್ನು ಈ ಕಾನೂನು ಗುರುತಿಸುತ್ತದೆ. ಮತ್ತು ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಅಥವಾ ಸೈದ್ಧಾಂತಿಕವಾಗಿ ಯಾವ ಪರಿಣಾಮ ಕೂಡಾ ಬೀರಬಹುದು ಎಂದೇ ಇದನ್ನು ಅಂದಾಜಿಸಲಾಗಿದೆ. ಸುಪ್ರೀಂ ಕೋರ್ಟ್ ಈ ಕಾನೂನು ಜಾರಿಯ ಬಗ್ಗೆ ಹಿಂದೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿತ್ತು ಮತ್ತು ಕೇಂದ್ರದ ಮಾತುಗಳನ್ನು ಕೇಳದೆ ಕಾನೂನಿಗೆ ತಡೆ ನೀಡಿ ಮಧ್ಯಂತರ ಆದೇಶವನ್ನು ನೀಡಲು ನಿರಾಕರಿಸಿತ್ತು.

Related Articles

ಇತ್ತೀಚಿನ ಸುದ್ದಿಗಳು