ಮಂಗಳೂರು : ಮೂರು ವರ್ಷದ ಹಿಂದೆ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಪದ್ಮನಾಭ ಎಂಬಾತನಿಗೆ ನ್ಯಾಯಾಲಯ ಶಿಕ್ಷೆ ಮತ್ತು ದಂಡವನ್ನು ವಿಧಿಸಿದೆ.
ಹಿನ್ನಲೆ : ಶಾಲೆ ಮುಗಿಸಿ ಮನೆಗೆ ತೆರಳುತಿದ್ದ ಬಾಲಕಿಯ ಮೇಲೆ ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದ ಪದ್ಮನಾಭ ಎಂಬಾತ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದು ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಹೋದಾಗ ಅವಳನ್ನು ಹಿಂಬಾಲಿಸಿದ ಪದ್ಮನಾಭ ಅವಳ ಮನೆಯಲ್ಲಿದ್ದ ಪೋಷಕರಿಗೂ ಅವಾಚ್ಯ ಶಬ್ದಗಳಿಂದ ಮಾತನಾಡಿದ್ದಾನೆ. ಈ ಘಟನೆಯು ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ಪೂರ್ಣಗೊಳಿಸಿದ್ದ ಅಲ್ಲಿನ ಪೋಲೀಸರು ಠಾಣಾ ಎಸ್ ಐ ಚಂದ್ರಶೇಖರ್ ಅವರು ನ್ಯಾಯಾಲಯಕ್ಕೆ ಪದ್ಮನಾಭನ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದ ಕುರಿತು ವಾದ ವಿವಾದಗಳ ನಂತರ ನ್ಯಾಯಾಧೀಶೆ ಮಂಜುಳಾ ಪದ್ಮನಾಭನನ್ನು ಅಪರಾಧಿ ಎಂದು ಘೋಷಿಸಿ ಆತನಿಗೆ ಪೋಕ್ಸೋ ಕಾಯ್ದೆ ಕಾಲಂ 12ರ ಅಡಿಯ ಅಪರಾಧಕ್ಕೆ 3 ವರ್ಷ ಸಾಧಾರಣ ಶಿಕ್ಷೆ ಮತ್ತು ದಂಡ, ಐಪಿಸಿ 354(ಡಿ) ಅಡಿಯ ಅಪರಾಧಕ್ಕಾಗಿ 3 ವರ್ಷ ಸಾಧಾರಣ ಶಿಕ್ಷೆ ಮತ್ತು ದಂಡ ಮತ್ತು ಐಪಿಸಿ 341ರ ಅಡಿಯ ಅಪರಾಧಕ್ಕಾಗಿ ಒಂದು ವರ್ಷ ಸಾಧಾರಣ ಶಿಕ್ಷೆ ವಿಧಿಸಿದ್ದಾರೆ. ಇಷ್ಟಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶ ನೀಡಿದೆ.