Saturday, July 12, 2025

ಸತ್ಯ | ನ್ಯಾಯ |ಧರ್ಮ

ಈ ಕೂಡಲೇ ಜಯಪ್ರದಾರನ್ನು ಬಂಧಿಸಿ: ಪೊಲೀಸರಿಗೆ ಕೋರ್ಟ್ ಆದೇಶ

ಲಖನೌ: ಹಿರಿಯ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ಅವರನ್ನು ಬಂಧಿಸುವಂತೆ ಉತ್ತರ ಪ್ರದೇಶದ ನ್ಯಾಯಾಲಯ ಆದೇಶ ಹೊರಡಿಸಿದೆ. ಅವರ ವಿರುದ್ಧ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿದ್ದರೂ ವಿಚಾರಣೆಗೆ ಹಾಜರಾಗುತ್ತಿಲ್ಲ.

ಹೀಗಾಗಿ ಅವರನ್ನು ಬಂಧಿಸಿ ತಮ್ಮ ಮುಂದೆ ಹಾಜರುಪಡಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಜಯಪ್ರದಾ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ರಾಂಪುರದಿಂದ ಸಂಸದರಾಗಿ ಸ್ಪರ್ಧಿಸಿದ್ದರು. ಈ ಆದೇಶದಲ್ಲಿ ಅವರ ವಿರುದ್ಧ ಕೌಮಾರಿ ಮತ್ತು ಸ್ವರ್ ಪೊಲೀಸ್ ಠಾಣೆಗಳಲ್ಲಿ ಚುನಾವಣಾ ನಿಯಮ ಉಲ್ಲಂಘನೆಗಾಗಿ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಎರಡೂ ಪ್ರಕರಣಗಳು ರಾಂಪುರ ಪ್ರಜಾಪ್ರತಿನಿಧಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. ಆದರೆ, ತನಿಖೆಯ ಭಾಗವಾಗಿ ಹಲವು ಬಾರಿ ನೋಟಿಸ್ ನೀಡಿದ್ದರೂ ಜಯಪ್ರದಾ ಸ್ಪಂದಿಸಿಲ್ಲ.

ಏಳು ಬಾರಿ ವಾರಂಟ್ ಜಾರಿಯಾಗಿದ್ದರೂ ಪೊಲೀಸರು ಬಂಧಿಸಿಲ್ಲ ಎಂದು ಸರಕಾರಿ ವಕೀಲರು ತಿಳಿಸಿದ್ದಾರೆ. ಪ್ರಸ್ತುತ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಈ ಪ್ರಕರಣದ ಹೆಚ್ಚಿನ ವಿಚಾರಣೆಯನ್ನು ಇದೇ ತಿಂಗಳ 27ಕ್ಕೆ ಮುಂದೂಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page