Home ಬ್ರೇಕಿಂಗ್ ಸುದ್ದಿ ಪ್ರಚೋದನೆ ಭಾಷಣ ಪ್ರಕರಣ: ಐವರ ಬಂಧನ : ರೌಡಿಶೀಟರ್ ರಘುಗಾಗಿ ಹುಡುಕಾಟ

ಪ್ರಚೋದನೆ ಭಾಷಣ ಪ್ರಕರಣ: ಐವರ ಬಂಧನ : ರೌಡಿಶೀಟರ್ ರಘುಗಾಗಿ ಹುಡುಕಾಟ

0

ಸಕಲೇಶಪುರ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂದಿಸಿದಂತೆ ತಲೆಮರೆಸಿಕೊಂಡಿರುವ ಭಜರಂಗದಳ ಮುಖಂಡ ರಘು ಸಹಚರರು ಎಂದು ಗುರುತಿಸಿಕೊಂಡಿರುವ ಐವರನ್ನು ಸಕಲೇಶಪುರ ಟೌನ್ ಪೋಲಿಸರು ವಶಕ್ಕೆ ಪಡೆದಿದ್ದಾರೆ.

ಭಜರಂಗದಳ ಸಕ್ರಿಯ ಕಾರ್ಯಕರ್ತನಾಗಿ ಹಾಗೂ ಬೆಳಗೋಡು ಅರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸಮಾಡುವ ಶ್ರೀಕಾಂತ್, ಶ್ರೀಜೀತ್, ಪ್ರತಾಪ್, ಹಾಗೂ ಇತರೆ ಇಬ್ಬರನ್ನೂ ಬಂಧಿಸಲಾಗಿದೆ.
ಇನ್ನೂ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.
ರೌಡಿ ಶೀಟರ್ ರಘು ಬಂಧನಕ್ಕೆ ಎರಡನೇ ದಿನವೂ ಶೋಧ ಕಾರ್ಯ ಮುಂದುವರೆದಿದೆ.‌

ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ:
ತಾಲ್ಲೂಕಿನಲ್ಲಿ ತರಕಾರಿ ಮತ್ತು ಮೀನು ಮಾರುವ ಮುಸಲ್ಮಾನರ ಮೇಲೆ ಗುಂಡು ಹಾರಿಸುವ ಬೆದರಿಕೆ ಹಾಕಿ
ಪ್ರಚೋದನಕಾರಿ ಭಾಷಣ ಮಾಡಿದ ಪ್ರತಿಭಟನೆಗೆ ಪೋಲಿಸ್ ಇಲಾಖೆಯಿಂದ ಅನುಮತಿ ಪಡೆದಿರಲಿಲ್ಲ.‌ ಈ ಪ್ರತಿಭಟನೆಯಲ್ಲೂ ಕಾನೂನು ಉಲ್ಲಂಘನೆಯಾಗಿದೆ.

ಪೋಲಿಸರಿಗೆ ಯಾವುದೇ ರೀತಿಯ ಮಾಹಿತಿ ನೀಡದೇ ಏಕಾಏಕಿ ಸಾರ್ವಜನಿಕ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿರುವುದು ಬೆಳಕಿಗೆ ಬಂದಿದೆ.

You cannot copy content of this page

Exit mobile version