Thursday, June 20, 2024

ಸತ್ಯ | ನ್ಯಾಯ |ಧರ್ಮ

ಪ್ರಜ್ವಲ್ ರೇವಣ್ಣ ವಿರುದ್ಧ ಆರೆಸ್ಟ್ ವಾರಂಟ್ ಜಾರಿ

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಜಾರಿಯಾಗಿದೆ.

ಸಂಸದ ಮತ್ತು ಶಾಸಕರ ವಿಶೇಷ ನ್ಯಾಯಾಲಯ ಶನಿವಾರ ವಾರಂಟ್ ಹೊರಡಿಸಿದೆ. ಈ ಪ್ರಕರಣದ ಕುರಿತು ರಚಿಸಲಾಗಿದ್ದ ವಿಶೇಷ ತನಿಖಾ ಘಟಕದ ಮುಂದೆ ವಿಚಾರಣೆಗೆ ಹಾಜರಾಗದ ಕಾರಣ ಅಧಿಕಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಮೂರು ವಾರಗಳಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್ ಜರ್ಮನಿಯಿಂದ ಲಂಡನ್‌ಗೆ ರೈಲಿನಲ್ಲಿ ತೆರಳಿದ್ದನ್ನು ಎಸ್‌ಐಟಿ ಖಚಿತಪಡಿಸಿದೆ. ಅಲ್ಲದೆ ಪ್ರಜ್ವಲ್ ಈಗಾಗಲೇ ಹಲವು ಬಾರಿ ಭಾರತಕ್ಕೆ ಟಿಕೆಟ್ ಬುಕ್ ಮಾಡಿ ರದ್ದು ಮಾಡಿರುವುದು ಪತ್ತೆಯಾಗಿದೆ.

ನ್ಯಾಯಾಲಯದ ಮೆಟ್ಟಿಲೇರಿದ ನಂತರ ಎಸ್‌ಐಟಿ ಬಂಧನ ವಾರಂಟ್ ಜಾರಿ ಮಾಡಿದೆ. ಈಗಾಗಲೇ ಪ್ರಜ್ವಲ್ ಮೇಲೆ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ. ಪ್ರಜ್ವಲ್‌ನ ಬ್ಯಾಂಕ್‌ ಖಾತೆಗಳ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ತಂದೆ ಹೆಚ್.ಡಿ.ರೇವಣ್ಣ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಈ ಹಿಂದೆ ಅವರು ಏಳು ದಿನಗಳ ಕಾಲ ಜೈಲಿನಲ್ಲಿದ್ದರು. ಪ್ರಜ್ವಲ್ ತಪ್ಪಿತಸ್ಥರೆಂದು ಸಾಬೀತಾದರೆ ಅವರ ವಿರುದ್ಧ ಕ್ರಮಕ್ಕೆ ತಮ್ಮ ಅಭ್ಯಂತರವಿಲ್ಲ ಎಂದು ಅವರ ಅಜ್ಜ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಘೋಷಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು