Home ದೆಹಲಿ ಅಮಿತ್ ಶಾ ಆದೇಶದ ಮೇರೆಗೆ ಸತ್ಯೇಂದ್ರ ಜೈನ್ ಬಂಧನವಾಗಿದೆ: ಅರವಿಂದ್ ಕೇಜ್ರಿವಾಲ್ ಆರೋಪ

ಅಮಿತ್ ಶಾ ಆದೇಶದ ಮೇರೆಗೆ ಸತ್ಯೇಂದ್ರ ಜೈನ್ ಬಂಧನವಾಗಿದೆ: ಅರವಿಂದ್ ಕೇಜ್ರಿವಾಲ್ ಆರೋಪ

0

ದೆಹಲಿ: ತಮ್ಮ ಪಕ್ಷದ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರ ಬಂಧನವನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ (ಆಪ್) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇರ ಆದೇಶದ ಮೇರೆಗೇ ಜೈನ್ ಅವರನ್ನು ಬಂಧಿಸಲಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಸಚಿವರಾಗಿದ್ದ ಅವಧಿಯಲ್ಲಿ ಒಳಚರಂಡಿ ನೀರು ಶುದ್ಧೀಕರಣ (ಎಸ್ಟಿಪಿ) ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪದಡಿ ಸತ್ಯೇಂದ್ರ ಜೈನ್ ಸೇರಿದಂತೆ ಆರು ಜನರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಈ ಕುರಿತು ‘ಎಕ್ಸ್’ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, “ಸತ್ಯೇಂದ್ರ ಜೈನ್ ಅವರನ್ನು ಬಂಧಿಸುವ ಯಾವುದೇ ಉದ್ದೇಶವಿಲ್ಲ ಎಂದು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬೆಳಗ್ಗಿನವರೆಗೂ ಹೇಳುತ್ತಿದ್ದರು. ಆದರೆ ಮಧ್ಯಾಹ್ನದ ವೇಳೆಗೆ ಇಡೀ ಚಿತ್ರಣವೇ ಬದಲಾಯಿತು. ‘ಸತ್ಯೇಂದ್ರ ಜೈನ್ ಅವರನ್ನು ತಕ್ಷಣ ಬಂಧಿಸಿ’ ಎಂದು ಅಮಿತ್ ಶಾ ಅವರಿಂದ ಕರೆ ಬಂದ ಬೆನ್ನಲ್ಲೇ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.

You cannot copy content of this page

Exit mobile version