Wednesday, June 25, 2025

ಸತ್ಯ | ನ್ಯಾಯ |ಧರ್ಮ

ಬಿಹಾರ ಸಿದ್ದನಾಥ ದೇವಸ್ಥಾನ: ಕಾಲ್ತುಳಿತಕ್ಕೆ ಬಲಿಯಾದ ಏಳು ಮಂದಿ ಭಕ್ತರು

ಬಿಹಾರ ರಾಜ್ಯದ ಜೆಹಾನಾಬಾದ್ ಜಿಲ್ಲೆಯ ಮುಗ್ಧಂಪುರದ ಬಾಬಾ ಸಿದ್ಧನಾಥ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ಅವಘಡದಲ್ಲಿ ಏಳು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಅನೇಕ ಜನರು ಗಾಯಗೊಂಡಿದ್ದ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಯನ್ನು ಗಮನಿಸಿದರೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಸ್ಥಳೀಯ ಮುಗ್ದಂಪುರ ಆಸ್ಪತ್ರೆ ಮತ್ತು ಜೆಹಾನಾಬಾದ್ ಸದರ್ ಆಸ್ಪತ್ರೆಯಲ್ಲಿ ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರಲ್ಲಿ ಐವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ.

ಕಾಲ್ತುಳಿತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಪವಿತ್ರ ಮಾಸದ ಮೂರನೇ ಸೋಮವಾರವಾದ್ದರಿಂದ ದೇವಸ್ಥಾನದಲ್ಲಿ ಜನಜಂಗುಳಿ ಇತ್ತು. ಭಾನುವಾರ ರಾತ್ರಿಯಿಂದಲೇ ದೇವಸ್ಥಾನಕ್ಕೆ ಭಕ್ತರ ದಂಡು ಹರಿದು ಬಂದಿತ್ತು. ದೇವಸ್ಥಾನದಲ್ಲಿ ಶಿವನಿಗೆ ಜಲಾಭಿಷೇಕ ಮಾಡಲು ನೀರಿನೊಂದಿಗೆ ತೆರಳುತ್ತಿದ್ದಾಗ ಕಾಲ್ತುಳಿತ ಸಂಭವಿಸಿದೆ. ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ತಳ್ಳಿದಾಗ ಸರತಿ ಮುರಿದು ಅವಘಡ ಸಂಭವಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page