Friday, June 14, 2024

ಸತ್ಯ | ನ್ಯಾಯ |ಧರ್ಮ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನಾ ಸಂಸದ ಸಂಜಯ್ ರಾವತ್‌ಗೆ ಜಾಮೀನು ಮಂಜೂರು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವತ್‌ಗೆ ಮುಂಬೈನ ವಿಶೇಷ ನ್ಯಾಯಾಲಯ ಇಂದು ( ಬುಧವಾರ) ಜಾಮೀನು ಮಂಜೂರು ಮಾಡಿದೆ.

ಗೋರೆಗಾಂವ್ ಪ್ರದೇಶದಲ್ಲಿನ ಪತ್ರ ಚಾಲ್ (ಸಾಲು ವಠಾರ) ಮರು ಅಭಿವೃದ್ಧಿಗೆ ಸಂಬಂಧಿಸಿದ ಹಣಕಾಸು ಅಕ್ರಮಗಳಲ್ಲಿ ರಾವತ್ ಭಾಗಿಯಾಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಜುಲೈನಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರನ್ನು ಬಂಧಿಸಿತ್ತು. ಈ ಪ್ರಕರದ ಸಂಬಂಧಿ ಇಂದು ಬುಧವಾರ ಮುಂಬೈನ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ಎಂ ಜಿ ದೇಶಪಾಂಡೆ ಅವರು ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಕಳೆದ ವಾರ ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಆದೇಶ ಹೊರಡಿಸಿದ್ದು ಸಂಜಯ್ ರವತ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು