Home ಬೆಂಗಳೂರು ಚಿಂತಕ ತೇಲ್ತುಂಬ್ಡೆಗೆ ಜಾಮೀನು: ಸಿಪಿಐ ಎಂಎಲ್ ಲಿಬರೇಶನ್ ಸ್ವಾಗತ

ಚಿಂತಕ ತೇಲ್ತುಂಬ್ಡೆಗೆ ಜಾಮೀನು: ಸಿಪಿಐ ಎಂಎಲ್ ಲಿಬರೇಶನ್ ಸ್ವಾಗತ

0

ಬೆಂಗಳೂರು: ಚಿಂತಕ. ಹೋರಾಟಗಾರ ಆನಂದ್ ತೇಲ್ತುಂಬ್ಡೆಗೆ ಜಾಮೀನು ಮಂಜೂರು ಮಾಡಿದ ಮುಂಬೈ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಎನ್ಐಎ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ನ ಆದೇಶವನ್ನು ಸಿಪಿಐ(ಎಂಎಲ್) ಲಿಬರೇಷನ್ ರಾಜ್ಯ ಸಮಿತಿ ಸ್ವಾಗತಿಸಿದೆ.

ಸುಮಾರು ಎರಡೂವರೆ ವರ್ಷಗಳ ಜೈಲಿನಲ್ಲಿರುವ ಅವರ ಬಿಡುಗಡೆಯನ್ನು ನಾವು ಸ್ವಾಗತಿಸುವಾಗ, ಭೀಮಾ ಕೋರೆಗೋವ್ ಪ್ರಕರಣದಲ್ಲಿ ಸುಳ್ಳು ಆರೋಪದ ಮೇಲೆ ಬಂಧಿಸಲ್ಪಟ್ಟಿರುವ ಇತರರೆಲ್ಲರನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಸಿಪಿಐ (ಎಂಎಲ್) ಲಿಬರೇಶನ್ ರಾಜ್ಯ ಸಮಿತಿ ಒತ್ತಾಯಿಸಿದೆ.

ಬಿಜೆಪಿ/ಆರ್‌ಎಸ್‌ಎಸ್‌ನ ಫ್ಯಾಸಿಸ್ಟ್ ಆಡಳಿತದ ವಿರುದ್ಧ ಇರುವ ಒಂದು ಕಾರಣದಿಂದ ಮಾತ್ರ ಜೈಲಿನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳ ಬಿಡುಗಡೆಯನ್ನು ನಾವು ಆಗ್ರಹಿಸುತ್ತವೆ. ಮತ್ತು ಈ ಸಂದರ್ಭದಲ್ಲಿ ಹೋರಾಟಗಾರ ನಾಗರಿಕ ಸ್ವಾತಂತ್ರ್ಯಗಳನ್ನು ರಕ್ಷಿಸುವಲ್ಲಿ ನ್ಯಾಯಾಲಯಗಳು ತಮ್ಮ ಪಾತ್ರವನ್ನು ನಿರ್ವಹಿಸಬೇಕೆಂದು ಸಮಿತಿ ಆಗ್ರಹಿಸಿದೆ.

You cannot copy content of this page

Exit mobile version