Monday, June 9, 2025

ಸತ್ಯ | ನ್ಯಾಯ |ಧರ್ಮ

ʼಸಿಎಂ ಆದ ಕೂಡಲೇ ನಮ್ಮ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಹೆಣ್ಣು ಕೊಡುವುದನ್ನು ನಿಷೇಧಿಸಿʼ: ರೈತ ಯುವಕನಿಂದ ಕುಮಾರಸ್ವಾಮಿಗೆ ಪತ್ರ

ಕೋಲಾರ: ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲ, ನೀವು ಸಿಎಂ ಆದ ಕೂಡಲೇ ಕೋಲಾರದಿಂದ ಬೇರೆ ಜಿಲ್ಲೆಗೆ ಹೆಣ್ಣು ಕೊಡುವುದನ್ನು ನಿಲ್ಲಿಸಿ ಎಂದು ಒಕ್ಕಲಿಗ ಸಮುದಾಯದ ರೈತ ಯುವಕನೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರ ಸ್ವಾಮಿಯವರಿಗೆ ಪತ್ರ ಬರೆದಿದ್ದಾನೆ.

ಕೋಲಾರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಅಲ್ಲಿನ ಸ್ಥಳೀಯರ ಮತ್ತು ರೈತರ ಕಷ್ಟಗಳನ್ನು ಆಲಿಸುವ ಸಂದರ್ಭದಲ್ಲಿ, ಮುದುವತ್ತಿ ಗ್ರಾಮದ ಧನಂಜಯ ಎನ್ನುವ ಯುವಕ, ಒಕ್ಕಲಿಗ ರೈತ ಯುವಕರಿಗೆ ವಧುಗಳ ಸಮಸ್ಯೆ ಕಾಡುತ್ತಿದೆ ಎಂದು ಪತ್ರ ಬರೆದಿದ್ದು, ಪತ್ರದಲ್ಲಿ ತನ್ನ ಅಳಲನ್ನು ತೋಡಿಕೊಂಡಿದ್ದಾನೆ.

ʼಕೋಲಾರದಲ್ಲಿ ಒಕ್ಕಲುತನ ಮಾಡುವ ರೈತರ ಮಕ್ಕಳಿಗೆ ಹೆಣ್ಣುಗಳು ಸಿಗುತ್ತಿಲ್ಲ. ಜಿಲ್ಲೆಯ ಎಷ್ಟೋ ಜನ ಯುವಕರಿಗೆ ವಯಸ್ಸೂ 40-45 ಆಗುತ್ತಿದ್ದು ಹೆಣ್ಣುಗಳು ಸಿಗುತ್ತಿಲ್ಲ ಇದೊಂದು ಸಮಸ್ಯೆಯಾಗಿದೆ. ಇದಕ್ಕೆ ಕಾರಣ ತಮ್ಮ ಜಿಲ್ಲೆಯಲ್ಲಿನ ಹೆಣ್ಣುಮಕ್ಕಳನ್ನು ಹೊರ ಜಿಲ್ಲೆಗಳಿಗೆ ಹೆಚ್ಚಾಗಿ ಮದುವೆ ಮಾಡಿ ಕೊಡಲಾಗುತ್ತಿದೆ. ಈ ಬಾರಿ ನೀವು ಮುಖ್ಯಮಂತ್ರಿಗಳಾಗಿ ಕರ್ತವ್ಯ ನಿರ್ವಹಿಸುತ್ತೀರಿ ಎಂದು ನಂಬಿದ್ದೇವೆ, ಈ ಸಂದರ್ಭದಲ್ಲಿ ತಾವುಗಳು ದಯಮಾಡಿ ಈ ರೀತಿಯ ನಿಯಮವನ್ನು ಜಾರಿಗೆ ತರಬೇಕೆಂದುʼ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾನೆ.

ರೈತ ಯುವಕ ಬರೆದಿರುವ ಪತ್ರ

Related Articles

ಇತ್ತೀಚಿನ ಸುದ್ದಿಗಳು

You cannot copy content of this page