ಬೆಂಗಳೂರು : ಬೆಂಗಳೂರಿನಲ್ಲಿ ಬುಧವಾರ ಸಂಜೆಯಿಂದಲೇ ಬಾರೀ ಮಳೆ ಬೀಳುತ್ತಿದ್ದು, ಗುರುವಾರ ಮಳೆಯ ಪ್ರಮಾಣದಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬಂಗಾಳಕೊಲ್ಲಿಯಲ್ಲಿ ಬಾರೀ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ಬುಧವಾರ ಸಂಜೆ ಸುರಿದ ಬಾರೀ ಮಳೆಯಲ್ಲಿ ಎಲ್ಲೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸಂಜೆಯ ವೇಳೆಗೆ ಮನೆಗೆ ಹೋಗುವವರಿಗೆ ತೀರಾ ತೊಂದರೆ ಅನುಭವಿಸಿದಂತಾಗಿದೆ.
ಮೆಜೆಸ್ಟಿಕ್, ಚಾಮರಾಜಪೇಟೆ, ಗಾಂಧಿಬಜಾರ್, ಮಲ್ಲೇಶ್ವರಂ, ಜಯನಗರ, ಮೆಜೆಸ್ಟಿಕ್, ಕೆ.ಆರ್ ಮಾರುಕಟ್ಟೆ ಸೇರಿದಂತೆ ಹಲವೆಡೆ ಮಳೆ ತನ್ನ ಆರ್ಭಟ ಮೆರೆದಿದೆ. ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಎಬ್ಬಿಸಿದೆ.
ಹವಾಮಾನ ಇಲಾಖೆ ಮಾಹಿತಿಯಂತೆ ಇಂದು ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಾಗಿ ತಗ್ಗು ಪ್ರದೇಶಗಳಲ್ಲಿನ ಜನರು ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತೆ ವಹಿಸಿಕೊಳ್ಳಬೇಕಿದೆ.