ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಬಂಧನದ ಹಿನ್ನಲೆಯಲ್ಲಿ ಖ್ಯಾತ ಪತ್ರಕರ್ತ ಪಿ ಸಾಯಿನಾಥ್ ಅವರು ಮಠವು ಅವರಿಗೆ ನೀಡಿರುವ ಬಸವಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ.
2017 ರಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಯಿನಾಥ್ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿತ್ತು. ಈ ಪ್ರಶಸ್ತಿ ಐದು ಲಕ್ಷ ರೂಪಾಯಿಗಳನ್ನು ಒಳಗೊಂಡಿದ್ದು ಸಾಯಿನಾಥ್ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ.
ಅದೇ ಸಂದರ್ಭದಲ್ಲಿ ಸಾಯಿನಾಥ್ ಮಠದ ಸ್ವಾಮೀಜಿ ಹೈಸ್ಕೂಲ್ ಮಕ್ಕಳ ಮೇಲೆ ಎಸಗಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿದ್ದಾರೆ.