Thursday, June 19, 2025

ಸತ್ಯ | ನ್ಯಾಯ |ಧರ್ಮ

ಬಸವಶ್ರೀ ಪ್ರಶಸ್ತಿ ಹಿಂತಿರುಗಿಸಿದ ಪತ್ರಕರ್ತ ಪಿ ಸಾಯಿನಾಥ್

ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಬಂಧನದ ಹಿನ್ನಲೆಯಲ್ಲಿ ಖ್ಯಾತ ಪತ್ರಕರ್ತ ಪಿ ಸಾಯಿನಾಥ್ ಅವರು ಮಠವು ಅವರಿಗೆ ನೀಡಿರುವ ಬಸವಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ.

2017 ರಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಯಿನಾಥ್ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿತ್ತು. ಈ ಪ್ರಶಸ್ತಿ ಐದು ಲಕ್ಷ ರೂಪಾಯಿಗಳನ್ನು ಒಳಗೊಂಡಿದ್ದು ಸಾಯಿನಾಥ್ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ.

ಅದೇ ಸಂದರ್ಭದಲ್ಲಿ ಸಾಯಿನಾಥ್ ಮಠದ ಸ್ವಾಮೀಜಿ ಹೈಸ್ಕೂಲ್ ಮಕ್ಕಳ ಮೇಲೆ ಎಸಗಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page