Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ ಮಸೀದಿ ಮೇಲೆ ಕೇಸರಿ ಧ್ವಜ : ಆರೋಪಿಗಳನ್ನು ಬಂಧಿಸಿದ ಬಸವಕಲ್ಯಾಣ ಪೊಲೀಸ್

ಮಸೀದಿ ಮೇಲೆ ಕೇಸರಿ ಧ್ವಜ : ಆರೋಪಿಗಳನ್ನು ಬಂಧಿಸಿದ ಬಸವಕಲ್ಯಾಣ ಪೊಲೀಸ್

0

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ, ಕೋಮು ಗಲಭೆ ಎಬ್ಬಿಸಲು ಸಂಚು ರೂಪಿಸಿದ ಆರೋಪಿಗಳನ್ನು ಬಸವಕಲ್ಯಾಣ ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಾಲ್ವರು ಆರೋಪಿಗಳನ್ನು ಬಸವಕಲ್ಯಾಣ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಸೆಪ್ಟೆಂಬರ್‌ 20ರಂದು ತಡರಾತ್ರಿ 4 ಜನ ಯುವಕರು ಮದ್ಯ ಕುಡಿದು ಧ್ವಜ ಹಾರಿಸಿದ್ದಾರೆ ಎಂದು ಸ್ಥಳೀಯ ಮಸೀದಿಯ ಮುಖಂಡರು ದೂರು ನೀಡಿದ್ದರು. ಮಸೀದಿ ವ್ಯಾಪ್ತಿಯಲ್ಲಿ ಬರುವ ಚಾಂದಸಾಬ್‌ ಎಂಬುವರು ಕೊಟ್ಟಿದ್ದ ದೂರಿನ ಮೇರೆಗೆ ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಧ್ಯ ಆರೋಪಿಗಳನ್ನು ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಧನ್ನೂರಾ ಗ್ರಾಮದ ಅಭಿಷೇಕ್, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ್ ಬಿರಾದಾರ ಎಂದು ಪೊಲೀಸರು ಗುರುತಿಸಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಬಸವಕಲ್ಯಾಣ ಗ್ರಾಮೀಣ ಪೊಲೀಸರು ಗ್ರಾಮಸ್ಥರ ಮನವೊಲಿಸಿ ಕೇಸರಿ ಧ್ವಜ ತೆಗೆಸುವಲ್ಲಿ ಯಶಸ್ವಿಯಾಗಿದ್ದರು. ಈ ಸಂಬಂಧ ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

You cannot copy content of this page

Exit mobile version