ಹಾಸನ : ಅಧಿಕಾರಿಗಳೇ ತಮ್ಮ ಬಳಿ ಬಂದು ಖಾತೆ ಮಾಡಿ ಕೊಡುವಂತಹದ್ದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಹಾಗಾಗಿ ಅಧಿಕಾರಿಗಳಿಗೆ ಒತ್ತಡ ನೀಡದೆ ತಾಳ್ಮೆಯಿಂದ ಅರ್ಜಿಗಳನ್ನು ನೀಡಿ ಪೌತಿ ಖಾತೆಗಳನ್ನು ಮಾಡಿಸಿಕೊಳ್ಳಿ ಎಂದರು.ತಾಲೂಕಿನ ಸಾಲಗಾಮೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಸಲಗಾಮೆ ಹೋಬಳಿಯ ಪೌತಿ ಖಾತಾ ಅಂದೋಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಸಚಿವರಾದ ಕೃಷ್ಣ ಬೈರೇಗೌಡ ಅವರು ಕಂದಾಯ ಇಲಾಖೆಯಲ್ಲಿ ಬಹಳಷ್ಟು ಸುಧಾರಣೆಗಳನ್ನ ಮಾಡಿದ್ದಾರೆ. ಪೌತಿ ಖಾತೆ ಯಾರಿಗೆ ತಲುಪಬೇಕೋ ಅವರಿಗೆ ತಲುಪಿಸುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಕಿವಿಮಾತು ಹೇಳಿದರು. ನಮ್ಮ ಹಾಸನ ತಾಲ್ಲೂಕಿನಲ್ಲಿ ಅಧಿಕಾರಿಗಳು ನಿಮ್ಮ ಅರ್ಜಿಗಳನ್ನು ತೆಗೆದುಕೊಂಡು ಶೀಘ್ರದಲ್ಲೆ ತಮ್ಮ ಹೆಸರಿಗೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದಾರೆ.
ಹಲವಾರು ರೈತರು ದುರಸ್ತಿಯ ಬಗ್ಗೆ ಕೇಳುತ್ತಿದ್ದರು. ಈಗಾಗಲೇ ಹಾಸನ ತಾಲ್ಲೂಕಿನಲ್ಲಿ ತಹಸೀಲ್ದಾರರ ಕಚೇರಿಯಿಂದ 6500 ಅರ್ಜಿಗಳು ಎಡಿಎಲ್ಆರ್ ಕಚೇರಿಗೆ ತಲುಪಿವೆ. 2500 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇನ್ನುಳಿದ 4000 ಅರ್ಜಿಗಳು ಶೀಘ್ರದಲ್ಲೆ ಆಗುತ್ತವೆ. ತಮ್ಮಲ್ಲಿ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ವೇಗವಾಗಿ ಕೆಲಸಗಳು ಆಗುತ್ತವೆ. ಇಲ್ಲವೇ ಜಿಲ್ಲಾಧಿಕಾರಿಗಳ ಬಳಿ ಹೋಗಿ ತನಿಖೆಯಾದ ನಂತರ ತಮ್ಮ ಹೆಸರಿಗೆ ಖಾತೆಗಳು ಆಗುತ್ತವೆ ಎಂದರು. ತಹಶೀಲ್ದಾರ್ ಅವರು ಕೂಡಾ ಕ್ರಿಯಾಶೀಲರಾಗಿ ಪಂಚಾಯಿತಿ, ಹೋಬಳಿ ಮಟ್ಟಕ್ಕೆ ಬಂದು ಕೆಲಸ ಮಾಡಿಕೊಡುತ್ತಿದ್ದಾರೆ. ಹಾಗಾಗಿ ಅವರಿಗೆ ಹೆಚ್ಚಿನ ಒತ್ತಡ ನೀಡದೇ ಖಾತೆ ಮಾಡಿಸಿಕೊಳ್ಳಿ ಎಂದರಲ್ಲದೇ ಮೆಕ್ಕೆಜೋಳಕ್ಕೆ ಇತ್ತೀಚೆಗೆ ರೋಗ ಬರುತ್ತಿದೆ ಅದಕ್ಕೆ ಸಂಬAಧಪಟ್ಟAತೆ ಕೃಷಿ ಇಲಾಖೆ ನೀಡುವಂತಹ ಸಲಹೆ ಸೂಚನೆಗಳನ್ನು ತಮ್ಮ ಬೆಳೆಯಲ್ಲಿ ಅಳವಡಿಸಿಕೊಳ್ಳಿ ಎಂದು ತಿಳಿಸಲಾಯಿತು.
ತಹಶೀಲ್ದಾರ್ ಗೀತಾ ಅವರು ಮಾತನಾಡಿ, ಸರ್ಕಾರದಿಂದ ಬಂದ ಅಧಿಸೂಚನೆಯಂತೆ ನಾವು ನಮ್ಮ ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲಿಯೂ ಪೌತಿ ಖಾತೆ ವಿತರಣೆ ಮಾಡುತ್ತಿದ್ದೇವೆ. ಇದು 4ನೇ ಹೋಬಳಿಯಾಗಿದೆ. ಈಗಾಗಲೇ 3500 ಕಡತಗಳ ಖಾತೆ ಮಾಡಿದ್ದೇವೆ. ಇನ್ನು 50,000 ಪೌತಿ ಖಾತೆ ಬಾಕಿ ಇವೆ. ರೈತರು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಇದೊಂದು ಸುಲಭದ ರೀತಿಯಾಗಿದೆ ಇಂದು ಕೂಡಾ ಪೌತಿ ಖಾತೆಗೆ ಅರ್ಜಿ ಸಲ್ಲಿಸಬಹುದು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಪೌತಿ ಖಾತೆಯ ಮಹತ್ವ ಹಾಗೂ ಅದನ್ನು ಮಾಡಿಸಿಕೊಳ್ಳುವ ವಿಧಾನದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಇದೇ ಸಂದರ್ಭದಲ್ಲಿ ಕಂದಾಯ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಸಮಸ್ಯೆಯನ್ನು ಮನವಿ ಪತ್ರಗಳನ್ನು ರೈತರು ಶಾಸಕರಿಗೆ ನೀಡಿದರು. ಕಾರ್ಯಕ್ರಮದಲ್ಲಿ ಸಾಲಗಾಮೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು, ಕಾರ್ಯಕರ್ತರುಗಳು,ಮುಖಂಡರುಗಳು, ಗ್ರಾಮ ಲೆಕ್ಕಾಧಿಕಾರಿಗಳು, ರೈತರು, ಸಾರ್ವಜನಿಕರು ಉಪಸ್ಥಿತರಿದ್ದರು.