Friday, June 20, 2025

ಸತ್ಯ | ನ್ಯಾಯ |ಧರ್ಮ

‘Peepal’ ಸುದ್ದಿಯ ಬೆನ್ನಲ್ಲೇ ಸ್ಪಂದಿಸಿದ ಬೆಂಗಳೂರು ಉತ್ತರ ವಿವಿ : ದಲಿತ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ

ದಲಿತ ವಿದ್ಯಾರ್ಥಿಗಳಿಗೆ ನಿರ್ವಹಣಾ ವೆಚ್ಚ ಹೊರತುಪಡಿಸಿ, ಬೇರಾವುದೇ ಹೆಚ್ಚುವರಿ ಶುಲ್ಕವನ್ನು ಒತ್ತಾಯಪೂರ್ವಕವಾಗಿ ಪಾವತಿ ಮಾಡಬಾರದು ಎಂಬ ಸರ್ಕಾರಿ ಆದೇಶ ಇತ್ತು. ಆದಾಗ್ಯೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ದಲಿತ ವಿದ್ಯಾರ್ಥಿಗಳ ಕಡೆಯಿಂದ ಹೆಚ್ಚುವರಿ ಶುಲ್ಕ ವಿಧಿಸಿತ್ತು.

ಈ ಬಗ್ಗೆ ಪೀಪಲ್ ಮೀಡಿಯಾ ವಿಸ್ತೃತ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ವಿವಿ, ಈಗ ವಿದ್ಯಾರ್ಥಿಗಳ ಕಡೆಯಿಂದ ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರ ಕಛೇರಿಯನ್ನು ಸಂಪರ್ಕಿಸಿದ ಪೀಪಲ್ ಮೀಡಿಯಾ, ದಲಿತ ವಿದ್ಯಾರ್ಥಿಗಳ ಕಡೆಯಿಂದ ಬಂದ ದೂರಿನ ಬಗ್ಗೆ ಪ್ರಸ್ತಾಪಿಸಿದೆ.

ಆ ನಂತರದಲ್ಲಿ ಪೀಪಲ್ ಮೀಡಿಯಾ ಸಂಪರ್ಕಿಸಿದ ಯೂನಿವರ್ಸಿಟಿ ವಿದ್ಯಾರ್ಥಿಗಳು ಕೇವಲ ನಿರ್ವಹಣಾ ವೆಚ್ಚ ಮಾತ್ರ ಕಟ್ಟಿಕೊಳ್ಳಲು ಹೇಳಿದ್ದಾರೆ. ಈಗಾಗಲೇ ಶುಲ್ಕ ಪಾವತಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ಅಕೌಂಟಿಗೆ ಹಣ ಹಿಂದಿರುಗಿಸುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page