Home ಬೆಂಗಳೂರು ಬೆಂಗಳೂರು: ರಸ್ತೆಗುಂಡಿಗಳ ಹಾವಳಿ ವಿರೋಧಿಸಿ ಜನತಾದಳ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ರಸ್ತೆಗುಂಡಿಗಳ ಹಾವಳಿ ವಿರೋಧಿಸಿ ಜನತಾದಳ ಕಾರ್ಯಕರ್ತರಿಂದ ಪ್ರತಿಭಟನೆ

0

ಬೆಂಗಳೂರು: ಬೆಂಗಳೂರಿನ ಮೆಜಸ್ಟಿಕ್‌ ಪ್ರದೇಶದಲ್ಲಿ ರಸ್ತೆ ಗುಂಡಿಗಳ ಹಾವಳಿ ವಿರೋಧಿಸಿ ಜನತಾದಳ (ಜೆಡಿಎಸ್‌) ಕಾರ್ಯಕರ್ತರು, ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಟಿ.ಎ. ಶರವಣ ಅವರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಕಾರ್ಯಕರ್ತರು, ರಸ್ತೆಗುಂಡಿಗಳಲ್ಲಿ ಹೂವಿಟ್ಟು, ದೀಪ ಹಚ್ಚಿ, ಸರ್ಕಾರದ ವಿರುದ್ಧ ಘೋಷಣೆ ಕೂಗುವುದರ ಮೂಲಕ ಪ್ರತಿಭಟನೆ ಮಾಡಿದರು.

ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರ ನಗರದ ರಸ್ತೆಗಳ ದುಸ್ಥಿತಿಗೆ ಜೆಡಿಎಸ್ ಕಾರ್ಯಕರ್ತರು ಲೇವಡಿ ಮಾಡಿದ್ದು, ರಾಜ್ಯ ಸರ್ಕಾರಕ್ಕೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಗುಂಡಿಗಳನ್ನು ಮುಚ್ಚಯವಂತೆ 15 ದಿನಗಳ ಕಾಲಾವಕಾಶವನ್ನು ನೀಡಿದ್ದಾರೆ, ಇಲ್ಲದಿದ್ದರೆ ಎಲ್ಲಾ ವಾರ್ಡ್‌ಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಬೆಂಗಳೂರಿನ ರಸ್ತೆಗುಂಡಿಗಳಿ ಬಗ್ಗೆ ಮತ್ತು ಅವುಗಳಿಂದ ಸಂಭವಿಸಿರುವ ಅಫಘಾತ, ಸಾವುಗಳ ಬಗ್ಗೆ, ಜೆಡಿಎಸ್‌, ಸೇರಿದಂತೆ ಕಾಂಗ್ರೆಸ್‌ ಹಾಗೂ ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರಿಂದಲೂ ಸಹ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಬಗ್ಗೆ ಬಿಬಿಎಂಪಿಯಾಗಲಿ, ಸರ್ಕಾರವಾಗಲಿ ಯಾವುದೇ ಕ್ರಮ ಕೈಗೊಳ್ಳದಿರುವುದು, ಬೆಂಗಳೂರಿಗರ ಆಕ್ರೋಶಕ್ಕೆ ಕಾರಣವಾಗಿದೆ.

You cannot copy content of this page

Exit mobile version