ಭಾರತ ಐಕ್ಯತಾ ಯಾತ್ರೆ ಬೆಂಬಲಿಸಿ ರಾಹುಲ್ ಗಾಂಧಿಯಿಟ್ಟಿಗೆ ಪತ್ರಕರ್ತೆ ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್ ಮತ್ತು ಗೌರಿ ಲಂಕೇಸ್ ಸೋದರಿ ಕವಿತಾ ಲಂಕೇಶ್ ಹೆಜ್ಜೆ ಹಾಕಿದ್ದಾರೆ. ಈ ಸಮಯದಲ್ಲಿ ರಾಹುಲ್ ಗಾಂಧಿ ಗೌರಿ ಲಂಕೇಶ್ ಅವರನ್ನು ಸ್ಮರಿಸಿದ್ದಾರೆ.
ಹೌದು, ಹಂಚಿಕೊಂಡಿರುವ ರಾಹುಲ್ ಗಾಂಧಿ ಅವರು, ಗೌರಿ ಸತ್ಯದ ಪರವಾಗಿ ನಿಂತಿದ್ದರು. ಧೈರ್ಯದ ಪರವಾಗಿ ನಿಂತಿದ್ದರು. ಸ್ವಾತಂತ್ರ್ಯದ ಪರವಾಗಿ ನಿಂತಿದ್ದರು. ಭಾರತ್ ಜೋಡೋ ಯಾತ್ರೆ ಅವರ ಧ್ವನಿ. ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ. ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುವ ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಇತರರ ಪರವಾಗಿ ನಾನು ನಿಲ್ಲುತ್ತೇನೆ ಎಂದು ಫೋಟೋ ಪೋಸ್ಟ್ ಮಾಡಿದ್ದಾರೆ.