Monday, July 28, 2025

ಸತ್ಯ | ನ್ಯಾಯ |ಧರ್ಮ

ಕರ್ನಾಟಕದಲ್ಲಿ ಭಾರತ ಐಕ್ಯತಾ ಯಾತ್ರೆಗೆ ಚಾಲನೆ: ಬೆಂಬಲಕ್ಕೆ ಹರಿದು ಬಂದ ಜನಸ್ತೋಮ

ಚಾಮರಾಜನಗರ: ಭಾರತ ಐಕ್ಯತಾ ಯಾತ್ರೆ ಕರ್ನಾಟಕವನ್ನು ಪ್ರವೇಶಿಸಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗುವುದರ ಮೂಲಕ ಬೆಂಬಲ ಸೂಚಿಸಿದ್ದಾರೆ.

ಕರ್ನಾಟಕವನ್ನು ಪ್ರವೇಶಿಸಿರುವ ಭಾರತ ಐಕ್ಯತಾ ಯಾತ್ರೆಯ ಉದ್ಘಾಟನೆಯನ್ನು ರಾಹುಲ್‌ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್‌ ನಾಯಕರು ಸೇರಿ ಉದ್ಘಾಟಿಸಿದರು.

ಈ ವೇಳೆ ಯಾತ್ರೆಯ ಉದ್ಘಾಟನೆ ಸಮಾವೇಶದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ ಅವರು, ದೇಶದಲ್ಲಿ ‌ಬಿಜೆಪಿ‌ ಆರ್ ಎಸ್‌ಎಸ್ ದ್ವೇಷ ಹರಡುವ ವಿರುದ್ಧ, ‌ಸಂವಿಧಾನದ ರಕ್ಷಣೆಗಾಗಿ ಭಾರತ್ ಜೋಡೋ ಯಾತ್ರೆ ನಡೆಸಲಾಗುತ್ತಿದೆ. ಇದು ಭಾರತೀಯರ ಯಾತ್ರೆ. ಈ ಯಾತ್ರೆಗೆ  ಧರ್ಮ, ಜಾತಿ, ಲಿಂಗ ಎಂಬ ಅಸಮಾನತೆ ಇಲ್ಲದೇ ಭಾರತ ಐಕ್ಯತೆಗೆ ಎಲ್ಲಾರು ಬೆಂಬಲವಾಗಿ ನಿಂತಿದ್ದಾರೆ. ಇದೆ ನಮ್ಮ ಸುಂದರವಾದ, ಶಾಂತಿಯುತವಾದ, ಸೌಹಾರ್ದತೆಯ ಭಾರತ. ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, ಈ ಯಾತ್ರೆಯನ್ನು ಯಾರು ನಿಲ್ಲಿಸಲು ಸಾಧ್ಯವಿಲ್ಲ, ಯಾತ್ರೆಯಲ್ಲಿ ಸಾವಿರಾರು ಜನರು ತಮ್ಮ ನೋವನ್ನು , ಕಷ್ಟವನ್ನು ಹಂಚಿಕೊಂಡಿದ್ದಾರೆ.  ನಿರುದ್ಯೋಗ, ಬೆಲೆ ಏರಿಕೆ, ರೈತರ ಮೇಲೆ ಆಗುತ್ತಿರುವ ಅನ್ಯಾಯದ ಬಗ್ಗೆ ತಿಳಿಸುತ್ತಿದ್ದಾರೆ. ಈ ಹಿನ್ನಲೆ, ಯಾತ್ರೆಗೆ ಲಕ್ಷಾಂತರ ಜನರು ಬೆಂಬಲ ನೀಡುತ್ತಿರುವುದು ನಿಜಕ್ಕೂ ಯಾತ್ರೆಗೆ ಹುರುಪು ನೀಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಯಾತ್ರೆಯು ಗುಂಡ್ಲುಪೇಟೆಯಿಂದ ಶುರುವಾಗಿದ್ದು, ಯಾತ್ರೆಯಲ್ಲಿ ಕಾಂಗ್ರೆಸ್‌ ಮುಖಂಡರುಗಳು, ನಾಯಕರು ಸೇರಿದಂತೆ, ಯಾತ್ರೆಯ ಬೆಂಬಲಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page