ಬೆಂಗಳೂರು: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಾಯಕತ್ವದ ಮೇಲೆ ಕಾಂಗ್ರೆಸ್ ನಾಯಕರೇ ಭರವಸೆ ಕಳೆದುಕೊಂಡಿದ್ದಾರೆ. ಹೀಗಾಗಿ ಭಾರತ ಶೀಘ್ರವೇ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ನಾಯಕರ ವಯಸ್ಸು ಎಷ್ಟೇ ಇದ್ದರೂ, ಕಾಂಗ್ರೆಸ್ ಬಗೆಗಿನ ಎಲ್ಲರ ಅಸಮಧಾನ ಒಂದೇ, ಹೀಗಾಗಿ ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲರಿಗೂ ಅಸಮಾಧಾನ ಕಾಡುತ್ತಿದೆ. ಕಿರಿಯ ನಾಯಕರಿಂದ ಹಿಡಿದು ಹಿರಿಯ ನಾಯಕರವರೆಗೆ ಎಲ್ಲರಿಗೂ ಕಾಂಗ್ರೆಸ್ ಈಗ ಬೇಡವಾಗಿದೆ ಎಂದು ವ್ಯಂಗ್ಯವಾಡಿದೆ.