ಒಳಮೀಸಲಾತಿ | ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟದ ವತಿಯಿಂದ ಇಂದು ಭಾರತ್‌ ಬಂದ್

ಹೊಸದಿಲ್ಲಿ: ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ನೀಡಿರುವ ತೀರ್ಪನ್ನು ವಿರೋಧಿಸಿ ಬುಧವಾರ ಭಾರತ್ ಬಂದ್ ನಡೆಸುವುದಾಗಿ ಮೀಸಲಾತಿ ಬಚಾವೋ ಸಂಘರ್ಷ ಸಮಿತಿ ಪ್ರಕಟಿಸಿದೆ.

ರಾಜಸ್ಥಾನದ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳು ಈ ಬಂದ್‌ಗೆ ಬೆಂಬಲ ಘೋಷಿಸಿವೆ.

ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಆಯಾ ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಎಸ್ ಸಿ, ಎಸ್ ಟಿ ಜಾತಿಗಳನ್ನು ಉಪಜಾತಿಗಳಾಗಿ ವಿಂಗಡಿಸಿ ರಾಜ್ಯಗಳಿಗೆ ಮೀಸಲಾತಿ ನೀಡುವ ಅಧಿಕಾರ ನೀಡಿರುವುದು ಗೊತ್ತೇ ಇದೆ. ಆದರೆ, ಸುಪ್ರೀಂ ಕೋರ್ಟ್ ತೀರ್ಪಿನಿಂದ ಅನ್ಯಾಯವಾಗಿದೆ ಎಂದು ಸಮಿತಿ ಪ್ರಕಟಿಸಿದ್ದು, ಈ ಕುರಿತು ದೇಶದ ಜನತೆಗೆ ತಿಳಿಸಲು ಬುಧವಾರ ಭಾರತ್ ಬಂದ್ ಆಯೋಜಿಸುವುದಾಗಿ ತಿಳಿಸಿದೆ.

ಅನೇಕ ಸಾಮಾಜಿಕ ಮತ್ತು ರಾಜಕೀಯ ಗುಂಪುಗಳು ಮತ್ತು ಪಕ್ಷಗಳು ಈ ಬಂದ್‌ಗೆ ಬೆಂಬಲ ನೀಡುವ ನಿರೀಕ್ಷೆಯಿದೆ. ಭಾರತ್ ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜಸ್ಥಾನ ಅಧಿಕಾರಿಗಳು ತಿಳಿಸಿದ್ದಾರೆ.

ದಲಿತ ಮತ್ತು ಆದಿವಾಸಿ ಸಮುದಾಯಗಳ ಬೆಂಬಲ

ದಲಿತ ಮತ್ತು ಬುಡಕಟ್ಟು ಸಂಘಟನೆಗಳು ಕೂಡ ಭಾರತ್ ಬಂದ್‌ಗೆ ಕರೆ ನೀಡಿದ್ದು, ಕೆಳವರ್ಗದವರಿಗೆ ಬಲವಾದ ಮೀಸಲಾತಿ ಮತ್ತು ಪ್ರಾತಿನಿಧ್ಯವನ್ನು ಒತ್ತಾಯಿಸಿ. ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟ (NACDAOR) ತಮ್ಮ ಬೇಡಿಕೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಈ ಬೇಡಿಕೆಗಳ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಸಮಾನತೆ ಮತ್ತು ನ್ಯಾಯವನ್ನು ಕೋರಲಾಗಿದೆ. ಮೀಸಲಾತಿ ಕುರಿತು ಏಳು ಸದಸ್ಯರ ಸಾಂವಿಧಾನಿಕ ಪೀಠದ ತೀರ್ಪು ಎಸ್‌ಸಿ ಮತ್ತು ಎಸ್‌ಟಿಗಳಿಗೆ ದೊರಕಿರುವ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಲಾಗಿದೆ.

ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳು ಬುಧವಾರ ಶಾಂತಿಯುತ ಭಾರತ್ ಬಂದ್‌ನಲ್ಲಿ ಭಾಗವಹಿಸಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಲು ಕರೆ ನೀಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು