ನವದೆಹಲಿ: ಭಾರತವನ್ನು ಅಭಿವೃದ್ದಿ ಹೊಂದಿದ ರಾಷ್ಟ್ರವಾಗಿ ನಿರ್ಮಿಸಲು ಕಾರ್ಮಿಕ ಶಕ್ತಿಯು ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಷ್ಟ್ರೀಯ ಕಾರ್ಮಿಕ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಪ್ರಧಾನ ಮಂತ್ರಿ ಶ್ರಮ-ಯೋಗಿ ಮನ್ಧನ್ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆಗಳಂತಹ ಅನೇಕ ಪ್ರಯತ್ನಗಳು ನೀಡಿದ್ದೇವೆ.
ಕಾರ್ಮಿಕರಿಗೆ ಭದ್ರತಾ ರಕ್ಷಣೆ, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ನಮ್ಮ ಕನಸುಗಳು ಮತ್ತು ಆಕಾಂಕ್ಷೆಗಳನ್ನು ಸಾಕಾರಗೊಳಿಸುವಲ್ಲಿ ಭಾರತದ ಕಾರ್ಮಿಕ ಶಕ್ತಿಯು ದೊಡ್ಡ ಪಾತ್ರವನ್ನು ವಹಿಸುತ್ತದೆ. ಈ ಚಿಂತನೆಯೊಂದಿಗೆ, ದೇಶವು ಸಂಘಟಿತ ಮತ್ತು ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕೋಟಿಗಟ್ಟಲೆ ಕಾರ್ಮಿಕರಿಗಾಗಿ ನಿರಂತರವಾಗಿ ಕೆಲಸ ಮಾಡುತ್ತಿದೆ. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವನ್ನು ಮಾಡುವುದೇ ದೊಡ್ಡ ಸಂಕಲ್ಪ ಎಂದು ಹೇಳುವ ಮೂಲಕ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೇಳಿದ ʼಪಂಚ ಪ್ರಾಣʼ ತೆಗೆದುಕೊಳ್ಳುವಂತೆ ಜನರನ್ನು ಪ್ರಧಾನಿ ಮೋದಿಯವರು ಒತ್ತಾಯಿಸಿದರು.