Home ಬೆಂಗಳೂರು ಕಿಡ್ನ್ಯಾಪ್‌ ಪ್ರಕರಣ: ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು

ಕಿಡ್ನ್ಯಾಪ್‌ ಪ್ರಕರಣ: ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು

0

ಬೆಂಗಳೂರು: ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಅವರಿಗೆ ಸದ್ಯಕ್ಕೆ ರಿಲೀಫ್ ದೊರಕಿದ್ದು, ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿಯದ್ದರು.

ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹಾಗೂ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

15 ದಿನಗಳಿಂದ ನಾಪತ್ತೆಯಾಗಿರುವ ಭವಾನಿ ರೇವಣ್ಣ ಅವರ ಬಂಧನಕ್ಕೆ ಎಸ್‌ಐಟಿ ತೀವ್ರ ಶೋಧ ನಡೆಸಿದ್ದು, ಸುಳಿವು ಸಿಕ್ಕಿರಲಿಲ್ಲ. ಬಂಧನ ಭೀತಿಯಲ್ಲಿದ್ದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

You cannot copy content of this page

Exit mobile version