Home ರಾಜಕೀಯ ಸಚಿವ ಸ್ಥಾನಗಳ ಹಂಚಿಕೆಯಲ್ಲಿ ಮಿತ್ರ ಪಕ್ಷಗಳಿಗೆ ಪಕ್ಷಪಾತ: ಬಿಜೆಪಿ ವಿರುದ್ಧ ಶಿವಸೇನೆ ಸಂಸದ ಬಾರ್ನೆ ಆರೋಪ

ಸಚಿವ ಸ್ಥಾನಗಳ ಹಂಚಿಕೆಯಲ್ಲಿ ಮಿತ್ರ ಪಕ್ಷಗಳಿಗೆ ಪಕ್ಷಪಾತ: ಬಿಜೆಪಿ ವಿರುದ್ಧ ಶಿವಸೇನೆ ಸಂಸದ ಬಾರ್ನೆ ಆರೋಪ

0

ಬಿಜೆಪಿ ಪಕ್ಷವು ನೂತನ ಸರ್ಕಾರ ರಚನೆ ಸಂದರ್ಭದಲ್ಲಿ ಸಚಿವ ಸ್ಥಾನಗಳ ಹಂಚಿಕೆ ವಿಷಯದಲ್ಲಿ ತನ್ನ ಮಿತ್ರ ಪಕ್ಷಗಳಿಗೆ ಪಕ್ಷಪಾತ ಮಾಡಿದೆ ಎಂದು ಶಿವಸೇನೆ ಸಂಸದ ಶ್ರೀರಂಗ ಬಾರ್ನೆ ಆರೋಪಿಸಿದ್ದಾರೆ.

ಎನ್‌ಸಿಪಿ ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಅವರಿಗೆ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ನೀಡಬೇಕೆಂಬ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಭಿನ್ನಮತದ ಬೇಡಿಕೆಯ ಬೆನ್ನಲ್ಲೆ ಶಿಂಧೆ ಬಣದ ನೂತನ ಸಂಸದ ಶ್ರೀರಂಗ್ ಬಾರ್ನೆ ಅವರೂ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೊಸದಾಗಿ ರಚನೆಯಾದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಂಪುಟದಿಂದ ಪಕ್ಷವನ್ನು ಶಿಂಧೆ ಬಣದ ಶಿವಸೇನೆಯನ್ನು ಹೊರಗಿಟ್ಟಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ರಾಷ್ಟ್ರಪತಿ ಭವನದಲ್ಲಿ ಮೋದಿ ಸಂಪುಟ ಪ್ರಮಾಣ ವಚನ ಸ್ವೀಕರಿಸಿದ ಕೇವಲ ಒಂದು ದಿನದ ನಂತರ ಬಾರ್ನೆಯವರಿಂದ ಈ ಹೇಳಿಕೆ ಬಂದಿದೆ.

ವಿಶೇಷವೆಂದರೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಭಾಗವೂ ಸಹ ಕ್ಯಾಬಿನೆಟ್ ಸ್ಥಾನಕ್ಕಾಗಿ ಒತ್ತಾಯಿಸಿದೆ ಮತ್ತು ರಾಜ್ಯ ಸಚಿವ ಸ್ಥಾನದ ಪ್ರಸ್ತಾಪವನ್ನು ತಿರಸ್ಕರಿಸಿದೆ.

ಶಿವಸೇನೆಗೆ ಕ್ಯಾಬಿನೆಟ್ ಸಚಿವ ಸ್ಥಾನದ ನಿರೀಕ್ಷೆ ಇತ್ತು: ಎಚ್‌.ಡಿ. ಕುಮಾರಸ್ವಾಮಿ ಮತ್ತು ಜಿತನ್ ರಾಮ್ ಮಾಂಝಿ ಅವರಂತಹ ನಾಯಕರ ಪಕ್ಷಗಳು ಕ್ರಮವಾಗಿ ಎರಡು ಮತ್ತು ಒಂದು ಸ್ಥಾನವನ್ನು ಗೆದ್ದಿವೆ. ಅಂಥ ಪಕ್ಷಗಳ ಸಂಸದರನ್ನು ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಾಗಿ ನೇಮಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿರುವ ಬಾರ್ನೆ. ಸತಾರದ ಬಿಜೆಪಿ ಸಂಸದ ಉದಯನರಾಜೆ ಭೋಸಲೆ ಅವರು ಸಂಪುಟ ಸ್ಥಾನಕ್ಕೆ ಅರ್ಹರು ಎಂದು ಅವರು ಒತ್ತಿ ಹೇಳಿದ್ದಾರೆ.

“ಶಿವಸೇನೆಗೆ ಕ್ಯಾಬಿನೆಟ್ ಮಂತ್ರಿಗಿರಿ ಸಿಗುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು. ಆದರೆ, ಕೇವಲ ಒಂದು ಸ್ಥಾನವನ್ನು ಗೆದ್ದ ಪಕ್ಷಗಳು ಕೂಡ ಕ್ಯಾಬಿನೆಟ್ ಸ್ಥಾನವನ್ನು ಪಡೆದಿವೆ. ನಮ್ಮ ಪಕ್ಷಕ್ಕೆ ನೀಡದಿರುವುದು ಯಾವ ನ್ಯಾಯ ಎಂದು ಅವರು ಪ್ರಶ್ನಿಸಿದ್ದಾರೆ.

ಶಿವಸೇನೆಯ (ಯುಬಿಟಿ) ಸಂಜೋಗ್ ವಾಘೆರೆ ಪಾಟೀಲ್ ಅವರನ್ನು ಸೋಲಿಸುವ ಮೂಲಕ ಮಾವಲ್ ಕ್ಷೇತ್ರದಲ್ಲಿ ಸತತ ಮೂರನೇ ಬಾರಿಗೆ ಬಾರ್ನೆ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೂ, ಪಕ್ಷಕ್ಕೆ ಕೇವಲ ರಾಜ್ಯ ದರ್ಜೆ ಸಚಿವ ಸ್ಥಾನವನ್ನು ನೀಡಿರುವುದು ಅವರ ಬೇಸರಕ್ಕೆ ಕಾರಣವಾಗಿದೆ.

ಮೋದಿಯ ಹೊಸ ಸರ್ಕಾರದಲ್ಲಿ ಶಿಂಧೆ ಸೇನೆಯ ಪ್ರತಾಪ್ರಾವ್ ಜಾಧವ್ ಅವರು ಸ್ವತಂತ್ರ ಉಸ್ತುವಾರಿ ಹೊಂದಿರುವ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಸ್ಪರ್ಧಿಸಿದ್ದ 15 ಸ್ಥಾನಗಳಲ್ಲಿ ಶಿವಸೇನೆ ಏಳು ಸ್ಥಾನಗಳನ್ನು ಗೆದ್ದಿದೆ. ಆದರೆ, ಬಿಜೆಪಿ 28 ರಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿದೆ. ನಾವು ಬಿಜೆಪಿಯ ಹಳೆಯ ಮಿತ್ರ ಪಕ್ಷವಾಗಿರುವ ಶಿವಸೇನೆಗೆ ಕನಿಷ್ಠ ಒಂದು ಕ್ಯಾಬಿನೆಟ್ ಮತ್ತು ಒಂದು ಎಂಒಎಸ್ ಸ್ಥಾನವನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಶ್ರೀರಂಗ್ ಬಾರ್ನೆ ಅವರು ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವನ್ನು ಆರೋಪಿಸಿದ್ದಾರೆ. ಕ್ಯಾಬಿನೆಟ್ ಸ್ಥಾನಗಳ ಹಂಚಿಕೆಯಲ್ಲಿ ಪಕ್ಷಪಾತವಾಗಿದೆ. ಜೆಡಿಯು ಮತ್ತು ಟಿಡಿಪಿ ನಂತರ ಶಿವಸೇನೆ ಬಿಜೆಪಿಯ ಮೂರನೇ ಅತಿದೊಡ್ಡ ಮಿತ್ರ ಪಕ್ಷವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

You cannot copy content of this page

Exit mobile version