Saturday, November 23, 2024

ಸತ್ಯ | ನ್ಯಾಯ |ಧರ್ಮ

ಮಹಾರಾಷ್ಟ್ರ ಚುನಾವಣೆ: ಫಲಿತಾಂಶದ ಹಿಂದೆ ದೊಡ್ಡ ಷಡ್ಯಂತ್ರ ನಡೆದಿದೆ- ಸಂಜಯ್‌ ರಾವುತ್‌

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಗಲಿದೆ ಎಂಬ ಟ್ರೆಂಡ್‌ಗಳ ಜೊತೆಗೆ “ದೊಡ್ಡ ಪಿತೂರಿ” ಮತ್ತು ಏನೋ “ಅನುಮಾನಾಸ್ದವಾದ” ಸಂಗತಿಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಶನಿವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶಗಳು ಜನಾದೇಶವನ್ನು ಪ್ರತಿಬಿಂಬಿಸುವುದಿಲ್ಲ, ಏಕೆಂದರೆ ಗ್ರೌಂಡ್‌ ರಿಯಾಲಿಟಿ ವಿಭಿನ್ನವಾಗಿದೆ ಮತ್ತು ಸರ್ಕಾರದ ವಿರುದ್ಧ ಸ್ಪಷ್ಟವಾದ ಜನಾಕ್ರೋಶ ಇದೆ. ಇದರ ಹಿಂದೆ ದೊಡ್ಡ ಷಡ್ಯಂತ್ರವಿರುವಂತೆ ನನಗೆ ಕಾಣುತ್ತಿದೆ… ಇದು ಮರಾಠಿ ‘ಮನೂಸ್’ ಮತ್ತು ರೈತರ ಆದೇಶವಲ್ಲ,” ಎಂದು ಅವರು ಹೇಳಿದರು.

“ನಾವು ಇದನ್ನು ಜನಾದೇಶವೆಂದು ಒಪ್ಪಿಕೊಳ್ಳುವುದಿಲ್ಲ. ಚುನಾವಣಾ ಫಲಿತಾಂಶಗಳಲ್ಲಿ ಯಾವುದೋ ಷಡ್ಯಂತ್ರ ನಡೆದಿದೆ” ಎಂದು ರಾವತ್ ಹೇಳಿದರು.

ಚುನಾವಣೆಯಲ್ಲಿ ಹಣದ ಬಳಕೆಯಾಗಿರುವುದರಲ್ಲಿ ಸಂಶಯವಿಲ್ಲ ಎಂದು ಆರೋಪಿಸಿದರು.

“ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಎಲ್ಲಾ ಶಾಸಕರು ಹೇಗೆ ಗೆಲ್ಲುತ್ತಾರೆ? ಅವರ ದ್ರೋಹದಿಂದ ಮಹಾರಾಷ್ಟ್ರವನ್ನು ಕೆರಳಿಸಿದ ಅಜಿತ್ ಪವಾರ್ ಹೇಗೆ ಗೆಲ್ಲುತ್ತಾರೆ?” ಎಂದು ಅವರು ಪ್ರಶ್ನಿಸಿದರು.

ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಸಿದ್ಧವಾಗಿದೆ ಮತ್ತು ಚುನಾವಣಾ ಆಯೋಗದ ಇತ್ತೀಚಿನ ಅಂಕಿಅಂಶಗಳ ಪ್ರಕಾರ 288 ವಿಧಾನಸಭಾ ಸ್ಥಾನಗಳಲ್ಲಿ 204 ರಲ್ಲಿ ಮುನ್ನಡೆ ಸಾಧಿಸಿದೆ.

ಆರಂಭಿಕ ಟ್ರೆಂಡ್‌ಗಳ ಪ್ರಕಾರ ಅದರ ಅಭ್ಯರ್ಥಿಗಳು ಕೇವಲ 47 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವುದರೊಂದಿಗೆ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (MVA) ಮುಗ್ಗರಿಸುತ್ತಿದೆ.

ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ 149 ವಿಧಾನಸಭಾ ಸ್ಥಾನಗಳಲ್ಲಿ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 59 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಎಂವಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ 101 ಅಭ್ಯರ್ಥಿಗಳನ್ನು, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. (PTI)

Related Articles

ಇತ್ತೀಚಿನ ಸುದ್ದಿಗಳು

You cannot copy content of this page