Saturday, June 21, 2025

ಸತ್ಯ | ನ್ಯಾಯ |ಧರ್ಮ

ಕಲಬುರಗಿ: ಬೃಹತ್‌ ಕಲ್ಯಾಣ ಕ್ರಾಂತಿ ಸಮಾವೇಶ

ಕಲಬುರಗಿ: ಇಂದು ಮಲ್ಲಿಕಾರ್ಜುನ ಖರ್ಗೆಯವರು ನೂತನವಾಗಿ ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ʼಕಲ್ಯಾಣ ಕ್ರಾಂತಿ ಬೃಹತ್‌ ಸಮಾವೇಶʼದ ಜೊತೆಗೆ ಖರ್ಗೆ ಅವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಕಲಬುರಗಿಯ ಎನ್.ವಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಡಿಸೆಂಬರ್‌ 10, ಮಧ್ಯಾಹ್ನ 2 ಗಂಟೆಯಿಂದ ಶುರುವಾಗಿರುವ ಈ  ಕಾರ್ಯಕ್ರಮದಲ್ಲಿ, ಕಲ್ಯಾಣ ಕರ್ನಾಟಕಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆಗಳೂ ಮತ್ತು ಅವರ ಸಾಧನೆಗಳನ್ನು ಜನರ ಮುಂದಿಡಲಿವೆ.

ಈ ಬೃಹತ್‌ ಸಮಾವೇಶದಲ್ಲಿ, ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ವಿಧಾನ್‌ ಪರಿಷತ್‌ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್‌, ಎಂ.ಬಿ.ಪಾಟೀಲ್‌, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ್‌ ಜಾರಕಿಹೊಳಿ, ಜಿ.ಪರಮೇಶ್ವರ್‌, ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರಾದ ಡಾ. ಶರಣ ಪ್ರಕಾಶ ಪಾಟೀಲ್‌, ಕಾಂಗ್ರೆಸ್‌ ಶಾಸಕರು ಮಾಜಿ ಶಾಸಕರು, ಸಂಸದರು, ಜಿಲ್ಲಾ ಕಾಂಗ್ರೆಸ್‌ ಘಟಕಗಳ ಅಧ್ಯಕ್ಷರು ಸೇರಿದಂತೆ ಹಲವು ಕಾಂಗ್ರೆಸ್‌ ಮುಖಂಡರು ಭಾಗವಹಿಸಲಿದ್ದಾರೆ.

ಸಮಾವೇಶದಲ್ಲಿ 70000 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ವೇದಿಕೆಯಲ್ಲಿ 200 ಕ್ಕೂ ಹೆಚ್ಚು ಗಣ್ಯರು ಕುಳಿತುಕೊಳ್ಳುವ ವ್ಯವಸ್ಥೆಯನ್ನು ಮಾಡಿದ್ದಾರೆ.

ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಅನೇಕ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಭಾಗವಹಿಸಿಸಿದ್ದು, ಭದ್ರತೆಗಾಗಿ 6 ಜನ ಎಸಿಪಿ ಎಸಿಪಿಗಳು, 15 ಜನ ಪೊಲೀಸ್‌ ಇನ್‌ಸ್ಪೆಕ್ಟರ್‌ಗಳು, 24 ಪಿಎಸ್‌ಐ, 100 ಗೃಹ ರಕ್ಷಕ ದಳದ ಸಿಬ್ಬಂದಿ ಸೇರಿದಂತೆ 600 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ಕಲಬುರಗಿಯಲ್ಲಿ ನಿಯೋಜಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page