Saturday, June 15, 2024

ಸತ್ಯ | ನ್ಯಾಯ |ಧರ್ಮ

ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲಿನ ಮುನ್ಸೂಚನೆ

ಕುತೂಹಲದ ರಾಜ್ಯವಾಗಿದ್ದ ಉತ್ತರ ಪ್ರದೇಶದಲ್ಲಿ ಈಗ ಬಿಜೆಪಿ ಹಿನ್ನಡೆ ಅನುಭವಿಸಿದೆ. ಬಹುತೇಕ 55 ಕ್ಷೇತ್ರಗಳಲ್ಲಿ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮುಂದಿನ ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿಸಲಾಗಿದ್ದ ಯೋಗಿ ಆದಿತ್ಯನಾಥರಿಗೆ ಈ ಫಲಿತಾಂಶ ದೊಡ್ಡ ಆಘಾತ ಎಂದೇ ಊಹಿಸಲಾಗುತ್ತಿದೆ.

ಚುನಾವಣೆಗೂ ಮುನ್ನ ರಾಮಮಂದಿರದ ವಿಷಯವನ್ನೇ ತಮ್ಮ ಚುನಾವಣಾ ಅಸ್ತ್ರವನ್ನಾಗಿಸಿದ ಬಿಜೆಪಿಗೆ ಈ ಫಲಿತಾಂಶ ಬೇರೊಂದು ಸಂದೇಶ ರವಾನಿಸಿದಂತಾಗಿದೆ.

Related Articles

ಇತ್ತೀಚಿನ ಸುದ್ದಿಗಳು