Friday, June 20, 2025

ಸತ್ಯ | ನ್ಯಾಯ |ಧರ್ಮ

ತುಮಕೂರು: ಜೆಡಿಎಸ್ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ, ಮೈತ್ರಿಯಲ್ಲಿ ಬಿರುಕು

ತುಮಕೂರಿನಲ್ಲಿ ನಡೆದ ಜಂಟಿ ಸಭೆಯಲ್ಲಿ ಬಿಜೆಪಿ ಮತ್ತು ಜನತಾ ದಳ (ಜಾತ್ಯತೀತ) ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದು, ಲೋಕಸಭೆ ಚುನಾವಣೆಗೆ ಕೆಲವೇ ವಾರಗಳಿರುವಾಗ ಮಿತ್ರಪಕ್ಷಗಳ ನಡುವೆ ಬಿರುಕು ಮೂಡಿದೆ.

ತಮ್ಮ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಪರ ಪ್ರಚಾರ ಮಾಡಲು ಈ ಸಭೆ ಕರೆಯಲಾಗಿತ್ತು.

ತುಮಕೂರಿನಲ್ಲಿ ಸೋಮಣ್ಣ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋಲಿಗೆ ಬಿಜೆಪಿ ನಾಯಕ ಕೊಂಡಜ್ಜಿ ವಿಶ್ವನಾಥ್ ಕಾರಣ ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದ್ದು ಸಮಸ್ಯೆಗೆ ಕಾರಣವಾಯಿತು.

ವಿಶ್ವನಾಥ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್‌ ಮೂಲಕ ಸ್ಪರ್ಧಿಸಿದ್ದರು ಆದರೆ ನಂತರ ಬಿಜೆಪಿಗೆ ಸೇರಿದರು. ವಿಶ್ವನಾಥ್ ಮಾತನಾಡಲು ಮುಂದಾದಾಗ ಸೋಮಣ್ಣ ಅವರನ್ನು ತಡೆದರು. ವೇದಿಕೆಯಲ್ಲಿದ್ದ ಬಹುತೇಕ ಜೆಡಿಎಸ್ ಕಾರ್ಯಕರ್ತರು ಕೃಷ್ಣಪ್ಪ ಪರ ನಿಂತರು.

ಬಳಿಕ ಸಮಸ್ಯೆ ಬಗೆಹರಿದಿದ್ದರೂ ಚುನಾವಣೆಗೆ ಮುನ್ನ ಪಕ್ಷಗಳ ಕಾರ್ಯಕರ್ತರ ಒಗ್ಗಟ್ಟಿಗೆ ಸಂಕಷ್ಟ ಎದುರಾಗಿದೆ.

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, 25 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮೂರು ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ.

ಸೀಟು ಹಂಚಿಕೆ ಸೂತ್ರದ ಪ್ರಕಾರ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ – ಹಾಸನ, ಮಂಡ್ಯ ಮತ್ತು ಕೋಲಾರ.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹಾಸನದಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಹಾಸನ ದೇವೇಗೌಡರ ತವರು ಕ್ಷೇತ್ರ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿಯುವ ಸಾಧ್ಯತೆ ಇದೆ.

ಈ ನಡುವೆ ಬಿಜೆಪಿ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. 24 ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಕರ್ನಾಟಕ ಲೋಕಸಭೆ ಚುನಾವಣೆಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಒಟ್ಟಾಗಿ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿದ್ದವು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page