Wednesday, June 25, 2025

ಸತ್ಯ | ನ್ಯಾಯ |ಧರ್ಮ

ಬಿಜೆಪಿ ಕೇಜ್ರಿವಾಲ್ ಹತ್ಯೆಗೆ ಸಂಚು ರೂಪಿಸುತ್ತಿದೆ: ಸಚಿವೆ ಅತಿಶಿ ಗಂಭೀರ ಆರೋಪ

ಹೊಸದೆಹಲಿ: ಸ್ವಾತಿ ಮಲಿವಾಲ್ ವಿರುದ್ಧ ಕೇಜ್ರಿವಾಲ್‌ ಪಿಎ ದುರ್ವರ್ತನೆ ಪ್ರಕರಣದ ನಂತರ ದೆಹಲಿಯಲ್ಲಿ ರಾಜಕೀಯ ಸಮರ ಆರಂಭವಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಅತ್ತ ಬಿಜೆಪಿ ಸ್ವಾತಿ ಮಲಿವಾಲ್‌ ಅವರನ್ನು ಕೆಳಗಿಳಿಸಿ ಹಿರಿಯ ವಕೀಲರೊಬ್ಬರನ್ನು ಅವರ ಸ್ಥಾನಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸುತ್ತಿದ್ದರೆ ಇತ್ತ ಆಪ್‌ ಮೊನ್ನೆ ಸ್ವಾತಿ ಮಲಿವಾಲ್‌ ಬಿಜೆಪಿ ಪ್ರೇರಿತ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿತ್ತು.

ಈ ನಡುವೆ ಆಮ್ ಆದ್ಮಿ ಪಕ್ಷದ ಸಚಿವರಾದ ಅತಿಶಿ ಅರವಿಂದ್ ಕೇಜ್ರಿವಾಲ್ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಸಚಿವ ಅತಿಶಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೆಹಲಿ ಮುಖ್ಯಮಂತ್ರಿಗೆ ಬಹಿರಂಗವಾಗಿಯೇ ಜೀವ ಬೆದರಿಕೆ ಹಾಕಲಾಗುತ್ತಿದೆ. ದೆಹಲಿ ಮೆಟ್ರೋದಲ್ಲಿ ಬಹಿರಂಗವಾಗಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವ ಬೆದರಿಕೆಗಳನ್ನು ಹಾಕಲಾಗುತ್ತಿದೆ ಎಂದು ಅವರು ಹೇಳಿದರು.

ಇದಕ್ಕೆ ಸಾಕ್ಷಿಯಾಗಿ ಅವರು ಕೆಲವು ಛಾಯಾಚಿತ್ರ ಪ್ರತಿಗಳನ್ನು ಸಹ ಮಾಧ್ಯಮದ ಮುಂದೆ ಪ್ರಸ್ತುತಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page