ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತ ಭೂ ಒತ್ತುವರಿ ಪರಿಶೀಲನೆಯ ಜಂಟಿ ಸಂಸದೀಯ ಸಮಿತಿ ಸಭೆಯಿಂದ ಬಿಜೆಪಿ ಸದಸ್ಯರು ಪಲಾಯನಗೈದ ಘಟನೆ ಮಂಗಳವಾರ ನವದೆಹಲಿಯಲ್ಲಿ ನಡೆದಿದೆ.
ದೇವನಹಳ್ಳಿ ರೈತರ ಭೂ ಸ್ವಾಧೀನ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸಲು ನಟ ಪ್ರಕಾಶ್ ರಾಜ್, ಹೋರಾಟಗಾರ್ತಿ ಮೇಧಾ ಪಾಟ್ಕರ್ ಸೇರಿದಂತೆ ಪ್ರಮುಖರು ದೆಹಲಿಗೆ ತೆರಳಿದ್ದರು. ಇದೇ ವೇಳೆ ಭೂ ಒತ್ತುವರಿ ಪರಿಶೀಲನೆಯ ಜಂಟಿ ಸಂಸದೀಯ ಸಮಿತಿ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ವಿವಿಧ ಪಕ್ಷಗಳ ಸದಸ್ಯರು ಇದ್ದರು. ದೇವನಹಳ್ಳಿ ಹೋರಾಟ ಸಭೆಯ ಪ್ರಮುಖ ಚರ್ಚಾ ವಿಷಯವಾಗಿತ್ತು.
ಆದರೆ, ಸಭೆ ಪ್ರಾರಂಭಗೊಂಡಾಗ ಸಮಿತಿಯ ಬಿಜೆಪಿ ಸದಸ್ಯರು ಪಲಾನಗೈದಿದ್ದಾರೆ. ಸಭೆ ಪ್ರಾರಂಭಗೊಳ್ಳುತ್ತಿದ್ದಂತೆ ಈಗ ಬರುತ್ತೇವೆ ಎಂದು ಎದ್ದು ಹೋದ ಬಿಜೆಪಿ ಸದಸ್ಯರು ವಾಪಸ್ ಬರದೆ ತಪ್ಪಿಸಿಕೊಂಡಿದ್ದಾರೆ.
ಜೆಪಿಸಿ ಸಭೆಯಲ್ಲಿ ದೇವನಹಳ್ಳಿ ಭೂ ಸ್ವಾಧೀನ ವಿಚಾರವಾಗಿ ಸಮಗ್ರ ಚರ್ಚೆ ನಡೆದಿದೆ.