Friday, September 5, 2025

ಸತ್ಯ | ನ್ಯಾಯ |ಧರ್ಮ

ಇಂಡಿಯಾ ಮೈತ್ರಿ ತೊರೆಯುವಂತೆ ಬಿಜೆಪಿ ಒತ್ತಡ ಹೇರುತ್ತಿದೆ: ಆಮ್ ಆದ್ಮಿ ಪಕ್ಷ

ಚಂಡೀಗಢ, ಆಮ್ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಭಾರತೀಯ ಜನತಾ ಪಕ್ಷವು (ಬಿಜೆಪಿ) ಇಂಡಿಯಾ ಮೈತ್ರಿ ಕೂಟವನ್ನು ತೊರೆಯುವಂತೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದೆ. ಪಕ್ಷವನ್ನು ಹೆದರಿಸಲು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ನಕಲಿ ಮದ್ಯ ಹಗರಣದ ಪ್ರಕರಣಗಳಲ್ಲಿ ಸಿಲುಕಿಸಿ ಬಂಧಿಸಲು ಸಿದ್ಧತೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಚಂಡೀಗಢ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಈ ಆರೋಪ ಮಾಡಿದ್ದಾರೆ. 2024 ರ ಸಾರ್ವತ್ರಿಕ ಚುನಾವಣೆಗಳು ಸಮೀಪಿಸುತ್ತಿದೆ ಮತ್ತು ಈ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಯೆದುರು ಸೋಲುವ ಭಯ ಬಿಜೆಪಿಯನ್ನು ಕಾಡುತ್ತಿದೆ. ಏಕೆಂದರೆ ಕಳೆದ ಹತ್ತು ವರ್ಷಗಳಿಂದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎಲ್ಲಾ ರಂಗಗಳಲ್ಲಿಯೂ ದಯನೀಯವಾಗಿ ವಿಫಲವಾಗಿದೆ ಎಂದು ಅವರು ಹೇಳಿದರು.

ಕೇಜ್ರಿವಾಲ್ ಇಂಡಿಯಾ ಮೈತ್ರಿ ತೊರೆಯದಿದ್ದರೆ ಅವರನ್ನು ಬಂಧಿಸಲಾಗುವುದು ಎಂದು ಎಎಪಿ ನಾಯಕರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹರ್ಪಾಲ್ ಸಿಂಗ್ ಚೀಮಾ ಆರೋಪಿಸಿದ್ದಾರೆ. ಇದುವರೆಗೆ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದಿಂದ (ED) ಏಳು ಸಮನ್ಸ್‌ಗಳನ್ನು ಬಂದಿವೆ.

ಎಎಪಿ ಒಂದು ಆದರ್ಶವಾದಿ ಪಕ್ಷವಾಗಿದ್ದು, ಅವರ ಆದರ್ಶಗಳು ಶಹೀದ್-ಎ-ಆಜಂ ಭಗತ್ ಸಿಂಗ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್. “ಅವರು ನಮ್ಮನ್ನು ಹೆದರಿಸಲು ಸಾಧ್ಯವಾಗುವುದಿಲ್ಲ” ಎಂದು ಅವರು ಹೇಳಿದರು.

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟವು ಬಿಜೆಪಿಯನ್ನು ಸೋಲಿಸಿದೆ ಮತ್ತು ಇದು ಕೇವಲ ಟ್ರೈಲರ್ ಎಂದು ಆಪ್ ಸರ್ಕಾರದ ಕ್ಯಾಬಿನೆಟ್ ಸಚಿವ ಅನ್ಮೋಲ್ ಗಗನ್ ಮಾನ್ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page