Home ಬ್ರೇಕಿಂಗ್ ಸುದ್ದಿ ಬಿಜೆಪಿ ಉಸ್ತುವಾರಿ ಸಮಿತಿಯ ಅಧ್ಯಕ್ಷರನ್ನಾಗಿ ಜೈ ರಾಮ್‌ ಠಾಕೂರ್‌ ನೇಮಕ

ಬಿಜೆಪಿ ಉಸ್ತುವಾರಿ ಸಮಿತಿಯ ಅಧ್ಯಕ್ಷರನ್ನಾಗಿ ಜೈ ರಾಮ್‌ ಠಾಕೂರ್‌ ನೇಮಕ

0
ಶಿಮ್ಲಾ: ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸುರೇಶ್ ಕಶ್ಯಪ್ ತಿಳಿಸಿದ್ದಾರೆ.

ಸೋಮವಾರ ಸಂಜೆ ಇಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಕಶ್ಯಪ್ ಅವರು ಪಕ್ಷದ ಉನ್ನತ ನಾಯಕತ್ವವನ್ನು ಸಂಪರ್ಕಿಸಿದ ನಂತರ ಠಾಕೂರ್ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಸ್ಟೀರಿಂಗ್ ಸಮಿತಿಯ ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ಜತೆಗೆ ಮಾಜಿ ಎಚ್.ಪಿ. ವಿಧಾನಸಭೆ ಸ್ಪೀಕರ್ ರಾಜೀವ್ ಬಿಂದಾಲ್ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಅವರು ಹೇಳಿದರು.

ಹಿಮಾಚಲ ಪ್ರದೇಶದಲ್ಲಿ ಮುಂದಿನ ನಾಲ್ಕು ತಿಂಗಳೊಳಗೆ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಸುರೇಶ್ ಕಶ್ಯಪ್ ತಿಳಿಸಿದರು.

You cannot copy content of this page

Exit mobile version