Home ಕರ್ನಾಟಕ ಚುನಾವಣೆ - 2023 ಚಿನ್ನದಂತ ಕ್ಷೇತ್ರ ಕಿತ್ತುಕೊಂಡು ನನ್ನನ್ನು ನಿರುದ್ಯೋಗಿ ಮಾಡಿದ್ದಾರೆ : ವಿ ಸೋಮಣ್ಣ ಬೇಸರ

ಚಿನ್ನದಂತ ಕ್ಷೇತ್ರ ಕಿತ್ತುಕೊಂಡು ನನ್ನನ್ನು ನಿರುದ್ಯೋಗಿ ಮಾಡಿದ್ದಾರೆ : ವಿ ಸೋಮಣ್ಣ ಬೇಸರ

0

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕ ವಿ.ಸೋಮಣ್ಣ ಚಾಮರಾಜನಗರ ಹಾಗೂ ವರಣಾ ಎರಡೂ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಚಿನ್ನದಂತಿದ್ದ ನನ್ನ ಕ್ಷೇತ್ರವನ್ನು ಕಿತ್ತುಕೊಂಡರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲವನ್ನೂ ಅನುಭವಿಸಿದ್ದೇನೆ, ಇದು ಆಗ ಬಾರದಿತ್ತು, ಸೋಲನ್ನು ಸ್ವೀಕಾರ ಮಾಡಬೇಕು. ಅದನ್ನು ಸ್ವೀಕಾರ ಮಾಡದಿದ್ದರೆ ನನ್ನಂತ ಹುಚ್ಚ ಮತ್ತೊಬ್ಬರಿಲ್ಲ. ಆದರೆ ಒಂದು ವಿಚಾರವೆಂದರೆ ಚಿನ್ನದಂತಿದ್ದ ನನ್ನ ಕ್ಷೇತ್ರವನ್ನು ಕಿತ್ತುಕೊಂಡು ನನನ್ನು ನಿರುದ್ಯೋಗಿ ಮಾಡಿದ್ದಾರೆ. ಬೆಳಗ್ಗೆ ನಾಲ್ಕು ಗಂಟೆ ಯಿಂದ ಕೆಲಸ ಆರಂಭಿಸುತ್ತಿದ್ದವನು ನಾನು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸೋತಾಗಿದೆ, ಏನು ಮಾತಾಡಲಿ? ಮಾತಾಡೋದು ಅಗತ್ಯ ಇಲ್ಲ. ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಇದೀಗ ಜನ ತೀರ್ಮಾನ ಮಾಡಿದ್ದಾರೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷದ ಮಾತು ಕೇಳಿದೆ ಅಷ್ಟೇ ಎಂದಿದ್ದಾರೆ.

You cannot copy content of this page

Exit mobile version