Home ದೇಶ ಮೋದಿ ನಾಯಕತ್ವದಲ್ಲಿ ಬಿಜೆಪಿ ಟೈಟಾನಿಕ್‌ ಹಡಗಿನಂತೆ ಮುಳುಗಲಿದೆ: ಮಾಜಿ ಸಂಸದ ಸುಬ್ರಹ್ಮಣ್ಯ ಸ್ವಾಮಿ

ಮೋದಿ ನಾಯಕತ್ವದಲ್ಲಿ ಬಿಜೆಪಿ ಟೈಟಾನಿಕ್‌ ಹಡಗಿನಂತೆ ಮುಳುಗಲಿದೆ: ಮಾಜಿ ಸಂಸದ ಸುಬ್ರಹ್ಮಣ್ಯ ಸ್ವಾಮಿ

0

ಹೊಸದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ʼಬಿಜೆಪಿಯಲ್ಲಿರುವ ನಾವು
ಪಕ್ಷವು ಟೈಟಾನಿಕ್‌ ಹಡಗಿನಂತೆ ನಮ್ಮ ಪಕ್ಷ ಮುಳುಗಬೇಕೆಂದು ಬಯಸುತ್ತಿದ್ದಲ್ಲಿ, ಅದನ್ನು ಹಾಗೆ ಮುಳುಗುವಂತೆ ಮುನ್ನಡೆಸಲು ಮೋದಿ ಅತ್ಯುತ್ತಮ ಆಯ್ಕೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಉಪಚುನಾವಣೆ ಫಲಿತಾಂಶಗಳು ಬಿಜೆಪಿ ಶಾಶ್ವತವಾಗಿ ಮುಳುಗುವ ಹಂತದಲ್ಲಿದೆ ಎಂಬುದನ್ನು ತೋರಿಸಿದೆ’ ಎಂದು ಟ್ವೀಟ್ ಮಾಡಿದ್ದಾರೆ.

13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಶನಿವಾರದಂದು ಹೊರಬಿದ್ದಿತ್ತು. ಈ ಪೈಕಿ 10 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದಿದೆ. ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಇನ್ನೊಂದು ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಸ್ವಾಮಿ ಮೋದಿಯನ್ನು ಟೀಕಿಸಿ ಹೇಳಿಕೆ ನೀಡಿದ್ದಾರೆ.

You cannot copy content of this page

Exit mobile version