Saturday, June 21, 2025

ಸತ್ಯ | ನ್ಯಾಯ |ಧರ್ಮ

ಬಿಜೆಪಿಗರು ದೇಶಭಕ್ತರಲ್ಲ, ದೇಶದ್ರೋಹಿಗಳು: ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ

ನವದೆಹಲಿ: ಕಾಂಗ್ರೆಸ್‌ ಮುಖಂಡ ಸಂಸದ ರಾಹುಲ್‌ ಗಾಂಧಿ, ‘ಬಿಜೆಪಿ ರಾಜಕೀಯವು ಇಂದು ಮಣಿಪುರದಲ್ಲಿ ಭಾರತ ಮಾತೆಯನ್ನೇ ಹತ್ಯೆ ಮಾಡಿದ್ದು, ಬಿಜೆಪಿಗರು ದೇಶದ್ರೋಹಿಗಳು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

160 ಜನರ ಬಲಿ ಪಡೆದಿರುವ ಜನಾಂಗೀಯ ಸಂಘರ್ಷಪೀಡಿತ ಮಣಿಪುರ ವಿಚಾರದಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹರಿತ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ಮುಖಂಡ ಹಾಗೂ ಸಂಸದ ರಾಹುಲ್‌, ಕೇರಳದ ವಯನಾಡ್‌ ಕ್ಷೇತ್ರದ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣನಿಗೆ ಹೋಲಿಸಿದ್ದಾರೆ.

ಬುಧವಾರ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಹುಲ್‌, ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಕಿಡಿಕಾರಿ ಅವರು ಮಣಿಪುರವನ್ನು ಭಾರತ ಎಂದು ಪರಿಗಣಿಸಿಯೇ ಇಲ್ಲ ಎಂದಿದ್ದು, ತಮ್ಮ ಭಾಷಣದಲ್ಲಿ ಮಣಿಪುರವನ್ನು ಪ್ರಮುಖವಾಗಿ ಪ್ರಸ್ತಾಪಿಸಿ ಮಾತಾಡಿದ ರಾಹುಲ್‌ ‘ನಾನು ಕೆಲವು ದಿನಗಳ ಹಿಂದೆ ಮಣಿಪುರಕ್ಕೆ ಹೋಗಿದ್ದೆ. ಆದರೆ ಪ್ರಧಾನಿಗಳು ಈವರೆಗೂ ಹೋಗಿಲ್ಲ ಎಂದರು.

ಏಕೆಂದರೆ ಅವರು ಮಣಿಪುರವನ್ನು ಭಾರತದ ಅಂಗ ಎಂದು ಪರಿಗಣಿಸಿಲ್ಲ. ಮಣಿಪುರ ನೀವು ಇಬ್ಭಾಗ ಮಾಡಿದ್ದೀರಿ’ ಎಂದು ಆರೋಪಿಸಿದರು. ‘ಮಣಿಪುರ ಕ್ಯಾಂಪ್‌ಗೆ ನಾನು ಹೋದಾಗ ಅನೇಕ ಮನಕಲಕುವ ಸಂಗತಿಗಳನ್ನು ನೋಡಿದೆ. ತನ್ನ ಕಣ್ಣೆದುರೇ ಮಗನನ್ನು ಗುಂಡಿಕ್ಕಿ ಸಾಯಿಸಲಾಯಿತು, ಆತನ ಶವದೊಂದಿಗೆ ತಾನು ರಾತ್ರಿ ಕಳೆದೆ ಎಂದು ಮಹಿಳೆಯೊಬ್ಬರು ಹೇಳಿದರು. ಇನ್ನೊಬ್ಬ ಮಹಿಳೆಯು ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಹೇಳಲು ಆಗದೇ ಮೂರ್ಛೆ ಹೋದಳು’ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page