Wednesday, August 20, 2025

ಸತ್ಯ | ನ್ಯಾಯ |ಧರ್ಮ

ಬ್ರಹ್ಮಪುತ್ರ ನದಿಯಲ್ಲಿ ದೋಣಿ ಮುಳುಗಡೆ: 7 ಮಂದಿ ನಾಪತ್ತೆ

ಅಸ್ಸಾಂ: ಇಂದು ಧುಬ್ರಿ ಜಿಲ್ಲೆಯ ಬ್ರಹ್ಮಪುತ್ರ ನದಿಯಲ್ಲಿ ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ 6ರಿಂದ7 ಮಂದಿ ನಾಪತ್ತೆಯಾಗಿದ್ದಾರೆ.

ಈ ಕುರಿತು ಧುಬ್ರಿ ಡೆಪ್ಯೂಟಿ ಕಮಿಷನರ್ ಅನ್ಬಮುತ್ತನ್ ಎಂ.ಪಿ. ಅವರು ಮಾಹಿತಿ ನೀಡಿದ್ದು, ರಾಜ್ಯ ವಿಪತ್ತು ಕಾರ್ಯಪಡೆ (ಎಸ್‌ಡಿಆರ್‌ಎಫ್‌) ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ತಂಡಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆಯಲ್ಲಿ ಧುಬ್ರಿಯ ಸರ್ಕಲ್ ಆಫೀಸರ್ ಕೂಡ ನಾಪತ್ತೆಯಾಗಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page